ಕಿತ್ತು ಹೋದ ರಸ್ತೆ, ಆಳವಾಗಿ ಬಿದ್ದಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು ಎಂದು ಸ್ಥಳೀಯ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದವು. ಈ ಸಲದ ಮಳೆಗಾಲದ ಬಳಿಕ ಗುಂಡಿಗಳನ್ನು ಮುಚ್ಚುವುದಾಗಿ ಪಾಲಿಕೆ ಹೇಳಿತ್ತು. ಕೆಲ ದಿನಗಳಿಂದ ನಗರದಲ್ಲಿ ಮಳೆ ಬಿಡುವ ನೀಡಿರುವ ಕಾರಣ ಕೆಲವೆಡೆ ದುರಸ್ತಿ ಕಾರ್ಯ ಆರಂಭವಾಗಿದ್ದು, ಬುಧವಾರ ಪೂರ್ಣಪ್ರಮಾಣದಲ್ಲಿ ಕೆಲಸ ಶುರುವಾಗಲಿದೆ.