<p><strong>ನವಲಗುಂದ:</strong> ‘ವಿರೋಧ ಪಕ್ಷಗಳು ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ ಮುಖ್ಯಮಂತ್ರಿಯವರು, ಸಚಿವರು ಉತ್ತರ ನೀಡುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರೈತರ ಹೋರಾಟಕ್ಕೆ ನಮ್ಮ ಸಹಕಾರ ಇದೆ. ಮೆಕ್ಕಜೋಳ ಖರೀದಿಗೆ ಸಂಬಂಧಿಸಿದಂತೆ ಎಥನಾಲ್ ಘಟಕಗಳಿಗೆ, ಡಿಸ್ಟಿಲರಿಸ್ಗಳಿಗೆ ತಾಕೀತು ಮಾಡಲಾಗಿದೆ. ಪರ್ಯಾಯವಾಗಿ ಏನು ಮಾಡಬೇಕು ಎಂಬ ಕುರಿತು ಮುಖ್ಯಮಂತ್ರಿಯವರು ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಪ್ರಧಾನಿ ಸಚಿವಾಲಯದ ಕಾರ್ಯದರ್ಶಿಗಳ ದುಬೈ ಮೂಲದ ‘ಮಾಧವ್’ ಆ್ಯಪ್ ವಿಚಾರದಲ್ಲಿ ಸಿಕ್ಕಿಬಿದ್ದಿದ್ಧಾರೆ, ಡಾಲರ್ ಬೆಲೆ ₹ 91ಕ್ಕೆ ಏರಿದೆ, ಒಂದು ತೊಲ ಚಿನ್ನದ ಬೆಲೆ ₹ 1.30 ಲಕ್ಷ ಆಗಿದೆ ಈ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಮಾತನಾಡಬೇಕು. ಬರೀ ಕಾಂಗ್ರೆಸ್ ಬಗ್ಗೆ ಮಾತನಾಡುವುದಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ‘ವಿರೋಧ ಪಕ್ಷಗಳು ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ ಮುಖ್ಯಮಂತ್ರಿಯವರು, ಸಚಿವರು ಉತ್ತರ ನೀಡುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರೈತರ ಹೋರಾಟಕ್ಕೆ ನಮ್ಮ ಸಹಕಾರ ಇದೆ. ಮೆಕ್ಕಜೋಳ ಖರೀದಿಗೆ ಸಂಬಂಧಿಸಿದಂತೆ ಎಥನಾಲ್ ಘಟಕಗಳಿಗೆ, ಡಿಸ್ಟಿಲರಿಸ್ಗಳಿಗೆ ತಾಕೀತು ಮಾಡಲಾಗಿದೆ. ಪರ್ಯಾಯವಾಗಿ ಏನು ಮಾಡಬೇಕು ಎಂಬ ಕುರಿತು ಮುಖ್ಯಮಂತ್ರಿಯವರು ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಪ್ರಧಾನಿ ಸಚಿವಾಲಯದ ಕಾರ್ಯದರ್ಶಿಗಳ ದುಬೈ ಮೂಲದ ‘ಮಾಧವ್’ ಆ್ಯಪ್ ವಿಚಾರದಲ್ಲಿ ಸಿಕ್ಕಿಬಿದ್ದಿದ್ಧಾರೆ, ಡಾಲರ್ ಬೆಲೆ ₹ 91ಕ್ಕೆ ಏರಿದೆ, ಒಂದು ತೊಲ ಚಿನ್ನದ ಬೆಲೆ ₹ 1.30 ಲಕ್ಷ ಆಗಿದೆ ಈ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಮಾತನಾಡಬೇಕು. ಬರೀ ಕಾಂಗ್ರೆಸ್ ಬಗ್ಗೆ ಮಾತನಾಡುವುದಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>