<p><strong>ಹುಬ್ಬಳ್ಳಿ</strong>: ಬೆಂಗಳೂರು –ಮುಂಬೈ ಎಕ್ಸ್ಪ್ರೆಸ್ ದ್ವಿಸಾಪ್ತಾಹಿಕ ರೈಲಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಲ್ಲಿನ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಭಾನುವಾರ ಹಸಿರು ನಿಶಾನೆ ತೋರಿದರು.</p>.<p>ನಂತರ ಮಾತನಾಡಿದ ಅವರು, ‘ಬೆಂಗಳೂರು–ಮುಂಬೈ ನಡುವೆ ರೈಲು ಸೇವೆ ಆರಂಭಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈಗ ಅದು ಈಡೇರಿದೆ. ಈ ರೈಲು ರಾಜ್ಯದ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ನಿಲುಗಡೆಯಾಗಲಿದೆ’ ಎಂದರು.</p>.<p>‘ಧಾರವಾಡ–ಬೆಳಗಾವಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ₹1 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಒದಗಿಸಿದರೆ ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ. ತುಮಕೂರು–ದಾವಣಗೆರೆ ನಡುವೆ ಶೇ 75ರಷ್ಟು ಭೂಸ್ವಾಧೀನ ರಾಜ್ಯ ಸರ್ಕಾರದಿಂದ ಆಗಿದೆ. ಈ ಎರಡೂ ಮಾರ್ಗಗಳಲ್ಲಿ ಕಾಮಗಾರಿ ಪೂರ್ಣಗೊಂಡರೆ ಪ್ರಯಾಣ ಅವಧಿಯಲ್ಲಿ ಎರಡೂವರೆ ಗಂಟೆ ಉಳಿಯಲಿದೆ’ ಎಂದು ಹೇಳಿದರು.</p>.<p>‘ಇದು ಸೂಪರ್ಫಾಸ್ಟ್ ರೈಲಾಗಿದ್ದು, ಇದರ ವೇಗವನ್ನು ಹೆಚ್ಚಿಸಲು ಸಹ ಚಿಂತನೆ ನಡೆದಿದೆ. ಈ ಮಾರ್ಗದಲ್ಲಿ ಒಂದು ವರ್ಷದ ಒಳಗೆ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ಸಲ ಪ್ರಯತ್ನಿಸಲಾಗುವುದು’ ಎಂದರು.</p>.<p>‘ಹುಬ್ಬಳ್ಳಿಯ ರೈಲು ನಿಲ್ದಾಣವನ್ನು ಪುನರ್ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ನೈರುತ್ಯ ರೈಲ್ವೆಯಿಂದ ₹400 ಕೋಟಿ ಮೊತ್ತದ ಪ್ರಸ್ತಾವವನ್ನು ಕಳಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರ ಜತೆ ಮಾತನಾಡಲಾಗುವುದು. ಅಳ್ನಾವರ ರೈಲು ನಿಲ್ದಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರ ಉದ್ಘಾಟನೆ ಮಾಡಲಾಗುವುದು’ ಎಂದರು.</p>.<p>‘ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅನುಷ್ಠಾನಕ್ಕೆ ಪ್ರಯತ್ನಿಸಲಾಗುತ್ತಿದೆ. ಈ ಮಾರ್ಗ ಅನುಷ್ಠಾನವಾದರೆ ಅಂಕೋಲಾ, ಬೆಲೆಕೇರಿ ಬಂದರು ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ರಾಮಪ್ಪ ಬಡಿಗೇರ, ಶಿವು ಮೆಣಸಿನಕಾಯಿ, ಮುಖಂಡರಾದ ಚನ್ನವೀರ ಮುಂಗುರವಾಡಿ, ಮಹೇಂದ್ರ ಸಿಂಘಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-1905350240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಬೆಂಗಳೂರು –ಮುಂಬೈ ಎಕ್ಸ್ಪ್ರೆಸ್ ದ್ವಿಸಾಪ್ತಾಹಿಕ ರೈಲಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಲ್ಲಿನ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಭಾನುವಾರ ಹಸಿರು ನಿಶಾನೆ ತೋರಿದರು.</p>.<p>ನಂತರ ಮಾತನಾಡಿದ ಅವರು, ‘ಬೆಂಗಳೂರು–ಮುಂಬೈ ನಡುವೆ ರೈಲು ಸೇವೆ ಆರಂಭಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈಗ ಅದು ಈಡೇರಿದೆ. ಈ ರೈಲು ರಾಜ್ಯದ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ನಿಲುಗಡೆಯಾಗಲಿದೆ’ ಎಂದರು.</p>.<p>‘ಧಾರವಾಡ–ಬೆಳಗಾವಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ₹1 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಒದಗಿಸಿದರೆ ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ. ತುಮಕೂರು–ದಾವಣಗೆರೆ ನಡುವೆ ಶೇ 75ರಷ್ಟು ಭೂಸ್ವಾಧೀನ ರಾಜ್ಯ ಸರ್ಕಾರದಿಂದ ಆಗಿದೆ. ಈ ಎರಡೂ ಮಾರ್ಗಗಳಲ್ಲಿ ಕಾಮಗಾರಿ ಪೂರ್ಣಗೊಂಡರೆ ಪ್ರಯಾಣ ಅವಧಿಯಲ್ಲಿ ಎರಡೂವರೆ ಗಂಟೆ ಉಳಿಯಲಿದೆ’ ಎಂದು ಹೇಳಿದರು.</p>.<p>‘ಇದು ಸೂಪರ್ಫಾಸ್ಟ್ ರೈಲಾಗಿದ್ದು, ಇದರ ವೇಗವನ್ನು ಹೆಚ್ಚಿಸಲು ಸಹ ಚಿಂತನೆ ನಡೆದಿದೆ. ಈ ಮಾರ್ಗದಲ್ಲಿ ಒಂದು ವರ್ಷದ ಒಳಗೆ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ಸಲ ಪ್ರಯತ್ನಿಸಲಾಗುವುದು’ ಎಂದರು.</p>.<p>‘ಹುಬ್ಬಳ್ಳಿಯ ರೈಲು ನಿಲ್ದಾಣವನ್ನು ಪುನರ್ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ನೈರುತ್ಯ ರೈಲ್ವೆಯಿಂದ ₹400 ಕೋಟಿ ಮೊತ್ತದ ಪ್ರಸ್ತಾವವನ್ನು ಕಳಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರ ಜತೆ ಮಾತನಾಡಲಾಗುವುದು. ಅಳ್ನಾವರ ರೈಲು ನಿಲ್ದಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರ ಉದ್ಘಾಟನೆ ಮಾಡಲಾಗುವುದು’ ಎಂದರು.</p>.<p>‘ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅನುಷ್ಠಾನಕ್ಕೆ ಪ್ರಯತ್ನಿಸಲಾಗುತ್ತಿದೆ. ಈ ಮಾರ್ಗ ಅನುಷ್ಠಾನವಾದರೆ ಅಂಕೋಲಾ, ಬೆಲೆಕೇರಿ ಬಂದರು ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ರಾಮಪ್ಪ ಬಡಿಗೇರ, ಶಿವು ಮೆಣಸಿನಕಾಯಿ, ಮುಖಂಡರಾದ ಚನ್ನವೀರ ಮುಂಗುರವಾಡಿ, ಮಹೇಂದ್ರ ಸಿಂಘಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-1905350240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>