<p><strong>ಕುಂದಗೋಳ</strong>: ತಾಲ್ಲೂಕಿನ ಬೆಣ್ಣಿಹಳ್ಳ ಅಗಲೀಕರಣ ಹಾಗೂ ಚೆಕ್ಡ್ಯಾಂ ನಿರ್ಮಾಣಕ್ಕಾಗಿ ₹3 ಸಾವಿರ ಕೋಟಿ ಅನುದಾನವನ್ನು ಅಧಿವೇಶನ ಮುಗಿಯುವುದರೊಳಗಾಗಿ ಬಿಡುಗಡೆ ಮಾಡಬೇಕೆಂದು ಜಿಗಳೂರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯನ್ನು ಗುರುವಾರ ರತ್ನ ಭಾರತ ರೈತ ಸಮಾಜ ಹಾಗೂ ರೈತರು ಕೆಲಕಾಲ ಬಂದ್ ಮಾಡಿ, ಪ್ರತಿಭಟಿಸಿದರು.</p>.<p>ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ್ರ ಬಸನಗೌಡ್ರ ಮಾತನಾಡಿ, ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾಗಿರುವ ಬೆಣ್ಣಿಹಳ್ಳ ಕಾಮಗಾರಿಗೆ ಅನುದಾನ ಸಮರ್ಪಕವಾಗಿ ನೀಡಿಲ್ಲ. ಕೂಡಲೆ ಸರ್ಕಾರ ಸ್ಪಂದಿಸಬೇಕು, ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.</p>.<p>ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಾಜು ಮಾವರಕರ ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೇವಪ್ಪ ಇಚ್ಚಂಗಿ, ಮಲ್ಲನಗೌಡ ಪಾಟೀಲ, ಬಸವರಾಜ್ ಅಣ್ಣಿಗೇರಿ, ಶ್ರೀಕಂಠಗೌಡ ಹಿರೇಗೌಡ್ರ, ರಾಜು ಮಲ್ಲಿಗವಾಡ, ಚನ್ನಬಸಪ್ಪ ಸಿದ್ದುನವರ, ವಿರುಪಾಕ್ಷ ಕಳ್ಳಿಮನಿ, ಶಂಕರಗೌಡ ಲಿಂಗನಗೌಡರ, ಅಖಿಲಾ ತಿವಾರಿ, ರುದ್ರಣ್ಣ ಬೆಂಗೇರಿ, ಚಿದಾನಂದ ಹರಿಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ತಾಲ್ಲೂಕಿನ ಬೆಣ್ಣಿಹಳ್ಳ ಅಗಲೀಕರಣ ಹಾಗೂ ಚೆಕ್ಡ್ಯಾಂ ನಿರ್ಮಾಣಕ್ಕಾಗಿ ₹3 ಸಾವಿರ ಕೋಟಿ ಅನುದಾನವನ್ನು ಅಧಿವೇಶನ ಮುಗಿಯುವುದರೊಳಗಾಗಿ ಬಿಡುಗಡೆ ಮಾಡಬೇಕೆಂದು ಜಿಗಳೂರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯನ್ನು ಗುರುವಾರ ರತ್ನ ಭಾರತ ರೈತ ಸಮಾಜ ಹಾಗೂ ರೈತರು ಕೆಲಕಾಲ ಬಂದ್ ಮಾಡಿ, ಪ್ರತಿಭಟಿಸಿದರು.</p>.<p>ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ್ರ ಬಸನಗೌಡ್ರ ಮಾತನಾಡಿ, ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾಗಿರುವ ಬೆಣ್ಣಿಹಳ್ಳ ಕಾಮಗಾರಿಗೆ ಅನುದಾನ ಸಮರ್ಪಕವಾಗಿ ನೀಡಿಲ್ಲ. ಕೂಡಲೆ ಸರ್ಕಾರ ಸ್ಪಂದಿಸಬೇಕು, ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.</p>.<p>ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಾಜು ಮಾವರಕರ ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೇವಪ್ಪ ಇಚ್ಚಂಗಿ, ಮಲ್ಲನಗೌಡ ಪಾಟೀಲ, ಬಸವರಾಜ್ ಅಣ್ಣಿಗೇರಿ, ಶ್ರೀಕಂಠಗೌಡ ಹಿರೇಗೌಡ್ರ, ರಾಜು ಮಲ್ಲಿಗವಾಡ, ಚನ್ನಬಸಪ್ಪ ಸಿದ್ದುನವರ, ವಿರುಪಾಕ್ಷ ಕಳ್ಳಿಮನಿ, ಶಂಕರಗೌಡ ಲಿಂಗನಗೌಡರ, ಅಖಿಲಾ ತಿವಾರಿ, ರುದ್ರಣ್ಣ ಬೆಂಗೇರಿ, ಚಿದಾನಂದ ಹರಿಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>