ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರ ತಾತ ಜವಾಹರಲಾಲ್ ನೆಹರೂ ಮತ್ತು ತಾಯಿ ಇಂದಿರಾಗಾಂಧಿ ಪ್ರಧಾನಿಯಾಗಿದ್ದೇ ರಾಜೀವ್ ಅವರಿಗೆ ಪ್ರಧಾನಿ ಹುದ್ದೆ ಒಲಿಯಲು ಕಾರಣ. ದೇಶಕ್ಕೆ ಯಾವುದೇ ಕೊಡುಗೆ ನೀಡದಿದ್ದರೂ ಅವರಿಗೆ ಭಾರತ ರತ್ನ ಕೊಟ್ಟ ಕಾಂಗ್ರೆಸ್, ಇದೀಗ ಅಪ್ರತಿಮ ದೇಶಭಕ್ತ ವೀರ ಸಾವರ್ಕರ್ ಅವರ ಹೆಸರು ಪ್ರಸ್ತಾಪಿಸಿದ್ದಕ್ಕೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದರು.