ಆರ್ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ಭೂಮಿಪೂಜೆಯ ಸಂಭ್ರಮ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರವೇ ಕಚೇರಿಯನ್ನು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಿ ಬಾಳೆದಿಂಡು, ಬಣ್ಣಬಣ್ಣದ ಹಾಳೆಗಳಿಂದ ಶೃಂಗಾರಗೊಳಿಸಲಾಗಿದೆ. ರಾಮ, ಲಕ್ಷ್ಮಣ ಹಾಗೂ ಸೀತೆಯರ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸಿ ಅಲಂಕಾರ ಮಾಡಲಾಗಿದೆ.