<p><strong>ಹುಬ್ಬಳ್ಳಿ</strong>: ನಗರದ ವಿದ್ಯಾನಗರ ಸ್ಮಶಾನದಲ್ಲಿಕೆನರಾ ಬ್ಯಾಂಕ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ, ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಸಚಿವರಾದ ಜಗದೀಶ ಶೆಟ್ಟರ್ ಮತ್ತು ಪ್ರಲ್ಹಾದ ಜೋಶಿ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಶೆಟ್ಟರ್, ‘₹2 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, ₹11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆ. 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.ಮಂಟೂರಿನ ಸ್ಮಶಾನದಲ್ಲೂ ಸ್ಮಾರ್ಟ್ ಸಿಟಿ ಅನುದಾನದಡಿ ₹2.60 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.</p>.<p>ಜೋಶಿ ಮಾತನಾಡಿ, ‘ಹೆಗ್ಗೇರಿ ಸ್ಮಶಾನದಲ್ಲಿ ₹1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಆನಂದನಗರದಲ್ಲಿ ₹74 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರ ನಿರ್ಮಾಣದ ಟೆಂಡರ್ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಧಾರವಾಡದ ಹೊಸ ಯಲ್ಲಾಪುರ ಸ್ಮಶಾನದಲ್ಲಿ ₹4.40 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರದ ಚೇಂಬರ್ ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನಗರದ ವಿದ್ಯಾನಗರ ಸ್ಮಶಾನದಲ್ಲಿಕೆನರಾ ಬ್ಯಾಂಕ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ, ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಸಚಿವರಾದ ಜಗದೀಶ ಶೆಟ್ಟರ್ ಮತ್ತು ಪ್ರಲ್ಹಾದ ಜೋಶಿ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಶೆಟ್ಟರ್, ‘₹2 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, ₹11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆ. 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.ಮಂಟೂರಿನ ಸ್ಮಶಾನದಲ್ಲೂ ಸ್ಮಾರ್ಟ್ ಸಿಟಿ ಅನುದಾನದಡಿ ₹2.60 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.</p>.<p>ಜೋಶಿ ಮಾತನಾಡಿ, ‘ಹೆಗ್ಗೇರಿ ಸ್ಮಶಾನದಲ್ಲಿ ₹1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಆನಂದನಗರದಲ್ಲಿ ₹74 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರ ನಿರ್ಮಾಣದ ಟೆಂಡರ್ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಧಾರವಾಡದ ಹೊಸ ಯಲ್ಲಾಪುರ ಸ್ಮಶಾನದಲ್ಲಿ ₹4.40 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರದ ಚೇಂಬರ್ ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>