ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ

Last Updated 30 ಮೇ 2021, 16:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ವಿದ್ಯಾನಗರ ಸ್ಮಶಾನದಲ್ಲಿಕೆನರಾ ಬ್ಯಾಂಕ್‌ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ, ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಸಚಿವರಾದ ಜಗದೀಶ ಶೆಟ್ಟರ್ ಮತ್ತು ಪ್ರಲ್ಹಾದ ಜೋಶಿ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶೆಟ್ಟರ್, ‘₹2 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, ₹11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‌ಗಳನ್ನು ಒದಗಿಸಲಾಗುತ್ತಿದೆ‌. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆ. 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.ಮಂಟೂರಿನ ಸ್ಮಶಾನದಲ್ಲೂ ಸ್ಮಾರ್ಟ್ ಸಿಟಿ ಅನುದಾನದಡಿ ₹2.60‌ ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.

ಜೋಶಿ ಮಾತನಾಡಿ, ‘ಹೆಗ್ಗೇರಿ ಸ್ಮಶಾನದಲ್ಲಿ ₹1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಆನಂದನಗರದಲ್ಲಿ ₹74 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರ ನಿರ್ಮಾಣದ ಟೆಂಡರ್ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಧಾರವಾಡದ ಹೊಸ ಯಲ್ಲಾಪುರ ಸ್ಮಶಾನದಲ್ಲಿ ₹4.40 ಲಕ್ಷ ವೆಚ್ಚದಲ್ಲಿ ಅನಿಲ ಆಧಾರಿತ ಚಿತಾಗಾರದ ಚೇಂಬರ್ ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT