ನಟಿ ಅನು ಪ್ರಭಾಕರ್ ಮತ್ತು ಮೇಯರ್ ವೀಣಾ ಭರದ್ವಾಡ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಾನಪದ ಸಂಶೋಧನಾ ಕೇಂದ್ರದ ತಂಡದ ಸದಸ್ಯರು ಜಾನಪದ ಸಾಂಪ್ರದಾಯಿಕ ಆಚರಣೆ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸುವರು. ಹಬ್ಬಗಳ ಅರ್ಥಪೂರ್ಣ ಆಚರಣೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಆರ್ಜೆ ಮೇಘಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಜಿ.ಪದ್ಮಾವತಿ ಮತ್ತು ಸಾಹಿತಿ ಸುನಂದಾ ಕಡಮೆ ಭಾಗವಹಿಸುವರು.