<p><strong>ಹುಬ್ಬಳ್ಳಿ</strong>: ‘ಬಿಹಾರದಲ್ಲಿ ಮತ ಕಳವು ಅಷ್ಟೇ ನಡೆದಿಲ್ಲ, ಮತ ಲೂಟಿ ಆಗಿದೆ. ಚುನಾವಣಾ ಆಯೋಗವು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಪಿಮುಷ್ಠಿಯಲ್ಲಿ ಇದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆರೋಪಿಸಿದರು.</p>.<p>ಇಲ್ಲಿ ಬುಧವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ’ ಎಂದರು.</p>.<p>ಸಚಿವ ಸಂತೋಷ್ ಲಾಡ್ ಮಾತನಾಡಿ, ‘ದೇಶದ ಪ್ರಧಾನಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಮೋಸದಿಂದ ಚುನಾವಣೆ ಗೆಲ್ಲಲು ಮುಂದಾದರೆ ಏನು ಮಾಡಲು ಸಾಧ್ಯ? ಪ್ರಧಾನಿ ಅವರಿಗೆ ಮೋಸ ಮಾಡುವುದರಲ್ಲಿ ‘ವಿಶ್ವಗುರು’ ಪಟ್ಟ ನೀಡಬೇಕು’ ಎಂದರು.</p>.<p>‘ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಿದರೆ, ಮತ ಗಳಿಕೆ ಪ್ರಮಾಣ ಹೆಚ್ಚಾಗಬೇಕು. ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದರೂ ಮತಗಳಿಕೆ ಪ್ರಮಾಣ ಹೆಚ್ಚಾಗಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಬಿಹಾರದಲ್ಲಿ ಮತ ಕಳವು ಅಷ್ಟೇ ನಡೆದಿಲ್ಲ, ಮತ ಲೂಟಿ ಆಗಿದೆ. ಚುನಾವಣಾ ಆಯೋಗವು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಪಿಮುಷ್ಠಿಯಲ್ಲಿ ಇದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆರೋಪಿಸಿದರು.</p>.<p>ಇಲ್ಲಿ ಬುಧವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ’ ಎಂದರು.</p>.<p>ಸಚಿವ ಸಂತೋಷ್ ಲಾಡ್ ಮಾತನಾಡಿ, ‘ದೇಶದ ಪ್ರಧಾನಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಮೋಸದಿಂದ ಚುನಾವಣೆ ಗೆಲ್ಲಲು ಮುಂದಾದರೆ ಏನು ಮಾಡಲು ಸಾಧ್ಯ? ಪ್ರಧಾನಿ ಅವರಿಗೆ ಮೋಸ ಮಾಡುವುದರಲ್ಲಿ ‘ವಿಶ್ವಗುರು’ ಪಟ್ಟ ನೀಡಬೇಕು’ ಎಂದರು.</p>.<p>‘ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಿದರೆ, ಮತ ಗಳಿಕೆ ಪ್ರಮಾಣ ಹೆಚ್ಚಾಗಬೇಕು. ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದರೂ ಮತಗಳಿಕೆ ಪ್ರಮಾಣ ಹೆಚ್ಚಾಗಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>