<p><strong>ಧಾರವಾಡ</strong>: ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಎಸ್ಡಿಎಂ ನಾರಾಯಣ ಹೃದಯಾಲಯ ವತಿಯಿಂದ ಭಾನುವಾರ ಆಯೋಜಿಸಿದ್ದ ಬೈಕಥಾನ್ಗೆ ಎಸ್ಡಿಎಂ ಮಹಾವಿದ್ಯಾಲಯ ಆವರಣದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಚಾಲನೆ ನೀಡಿದರು.</p>.<p>ಜಾಥಾವು ಎಸ್ಡಿಎಂ ಮಹಾವಿದ್ಯಾಲಯ, ಪಿ.ಬಿ.ರಸ್ತೆ, ಕೋರ್ಟ್ ವೃತ್ತ, ಜುಬಿಲಿ ವೃತ್ತ ಮಾರ್ಗವಾಗಿ ಕೆಸಿಡಿ ಕಾಲೇಜಿಗೆ ಆಗಮಿಸಿ ಸಂಪನ್ನಗೊಂಡಿತು. </p>.<p>ಜಾಥಾದಲ್ಲಿ ‘ಹೃದಯ ಆರೋಗ್ಯ’ ಹಾಗೂ ‘ಹೃದಯಾಘಾತ ತಡೆಗಟ್ಟುವಿಕೆ’ ಕುರಿತು ಜಾಗೃತಿ ಮೂಡಿಸಲಾಯಿತು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಬೈಕರ್ ಗುಂಪುಗಳು, ಸಾರ್ವಜನಿಕ ಗುಂಪುಗಳು, ಆರೋಗ್ಯ ಪ್ರೇಮಿಗಳು ಹಾಗೂ ಸ್ಥಳೀಯ ನಾಗರಿಕರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಹೃದಯ ರೋಗ ತಜ್ಞ ರಘು ಪ್ರಸಾದ ಮಾತನಾಡಿ, ‘ಆರೋಗ್ಯದ ಕಾಳಜಿ ವಹಿಸುವುದು ಸೂಕ್ತ. ಅದರ ಜೊತೆ ನಿಯಮಿತವಾಗಿ ತಪಾಸಣೆ ಮಾಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅರವಳಿಕೆ ತಜ್ಞ ಗಣೇಶ ನಾಯಕ್, ಪ್ರತಿಯೊಬ್ಬರ ಜೀವನಶೈಲಿ ಚೆನ್ನಾಗಿರಬೇಕು, ಪ್ರತಿನಿತ್ಯ ಯೋಗ ವ್ಯಾಯಾಮದಂತಹ ಚಟುವಟಿಕೆಯಲ್ಲಿ ನಿರತವಾಗಿರಬೇಕು ಎಂದರು.</p>.<p>ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ್ ಪಟ್ಟಣಶೆಟ್ಟಿ,ವೈದ್ಯಕೀಯ ವರಿಷ್ಠಾಧಿಕಾರಿ ಡಾ.ಕೀರ್ತಿ ಪಿ.ಎಲ್, ಜಿ.ವಿ ರಾಮನಗೌಡ, ದುಂಡೇಶ ತಡಕೋಡ ಅಜೇಯ ಹುಲಮನಿ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಎಸ್ಡಿಎಂ ನಾರಾಯಣ ಹೃದಯಾಲಯ ವತಿಯಿಂದ ಭಾನುವಾರ ಆಯೋಜಿಸಿದ್ದ ಬೈಕಥಾನ್ಗೆ ಎಸ್ಡಿಎಂ ಮಹಾವಿದ್ಯಾಲಯ ಆವರಣದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಚಾಲನೆ ನೀಡಿದರು.</p>.<p>ಜಾಥಾವು ಎಸ್ಡಿಎಂ ಮಹಾವಿದ್ಯಾಲಯ, ಪಿ.ಬಿ.ರಸ್ತೆ, ಕೋರ್ಟ್ ವೃತ್ತ, ಜುಬಿಲಿ ವೃತ್ತ ಮಾರ್ಗವಾಗಿ ಕೆಸಿಡಿ ಕಾಲೇಜಿಗೆ ಆಗಮಿಸಿ ಸಂಪನ್ನಗೊಂಡಿತು. </p>.<p>ಜಾಥಾದಲ್ಲಿ ‘ಹೃದಯ ಆರೋಗ್ಯ’ ಹಾಗೂ ‘ಹೃದಯಾಘಾತ ತಡೆಗಟ್ಟುವಿಕೆ’ ಕುರಿತು ಜಾಗೃತಿ ಮೂಡಿಸಲಾಯಿತು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಬೈಕರ್ ಗುಂಪುಗಳು, ಸಾರ್ವಜನಿಕ ಗುಂಪುಗಳು, ಆರೋಗ್ಯ ಪ್ರೇಮಿಗಳು ಹಾಗೂ ಸ್ಥಳೀಯ ನಾಗರಿಕರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಹೃದಯ ರೋಗ ತಜ್ಞ ರಘು ಪ್ರಸಾದ ಮಾತನಾಡಿ, ‘ಆರೋಗ್ಯದ ಕಾಳಜಿ ವಹಿಸುವುದು ಸೂಕ್ತ. ಅದರ ಜೊತೆ ನಿಯಮಿತವಾಗಿ ತಪಾಸಣೆ ಮಾಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅರವಳಿಕೆ ತಜ್ಞ ಗಣೇಶ ನಾಯಕ್, ಪ್ರತಿಯೊಬ್ಬರ ಜೀವನಶೈಲಿ ಚೆನ್ನಾಗಿರಬೇಕು, ಪ್ರತಿನಿತ್ಯ ಯೋಗ ವ್ಯಾಯಾಮದಂತಹ ಚಟುವಟಿಕೆಯಲ್ಲಿ ನಿರತವಾಗಿರಬೇಕು ಎಂದರು.</p>.<p>ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ್ ಪಟ್ಟಣಶೆಟ್ಟಿ,ವೈದ್ಯಕೀಯ ವರಿಷ್ಠಾಧಿಕಾರಿ ಡಾ.ಕೀರ್ತಿ ಪಿ.ಎಲ್, ಜಿ.ವಿ ರಾಮನಗೌಡ, ದುಂಡೇಶ ತಡಕೋಡ ಅಜೇಯ ಹುಲಮನಿ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>