<p><strong>ಹುಬ್ಬಳ್ಳಿ: </strong>ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಸೇವಾ ಸ್ತಪಾಹದ ಅಂಗವಾಗಿ,ನಗರದ ದುರ್ಗದ ಬೈಲ್ನಲ್ಲಿ ಬಿಜೆಪಿ ವತಿಯಿಂದ, ‘ಡ್ರಗ್ಸ್ ಮುಕ್ತ ಕರ್ನಾಟಕ’ ಮಾದಕ ವಸ್ತು ಹಾಗೂ ವ್ಯಸನ ನಿರ್ಮೂಲನಾ ಜನಜಾಗೃತಿ ಕಾರ್ಯಕ್ರಮ ಶನಿವಾರ ಜರುಗಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ, ‘ಚಿತ್ರರಂಗ ಸೇರಿದಂತೆ, ಸಮಾಜ ಹಲವು ಕ್ಷೇತ್ರಗಳನ್ನು ಮಾದಕ ವಸ್ತು ವ್ಯಾಪಿಸಿದೆ. ಯುವ ಸಮುದಾಯವೇ ಈ ದಂಧೆ ಗುರಿಯಾಗಿರುವುದು ಆತಂಕಕಾರಿ. ಹಾಗಾಗಿ, ಸರ್ಕಾರ ಡ್ರಗ್ಸ್ ಕಡಿವಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ರವೀಂದ್ರ ಮಾತನಾಡಿ, ‘ಕೊರೊನಾ ಸೋಂಕಿನ ಬಗ್ಗೆ ಭಯಗೊಳ್ಳದೆ, ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಕೈಗಳನ್ನು ಆಗಾಗ ತೊಳೆದುಕೊಳ್ಳುವುದು ಹಾಗೂ ಸೂಕ್ತ ಅಂತರ ಕಾಪಾಡಿಕೊಳ್ಳುವುದರಿಂದ ನೆಮ್ಮದಿಯಾಗಿರಬಹುದು’ ಎಂದು ಹೇಳಿದರು.</p>.<p>ಸಹ ಸಂಚಾಲಕ ಡಾ. ಮೃತ್ಯುಂಜಯ, ಹುಡಾ ಸದಸ್ಯ ಚಂದ್ರಶೇಖರ ಗೋಕಾಕ, ಜಗದೀಶ ಬುಳ್ಳಾನವರ, ಮಂಜುನಾಥ ಬಿಜವಾಡ, ಮಲ್ಲಿಕಾರ್ಜುನ ಶಿರಗುಪ್ಪಿ, ಡಾ. ಕಾಟಕರ, ಡಾ. ಗಲಗೆ ಹಾಗೂ ವಕ್ತಾರ ಲಕ್ಷ್ಮೀಕಾಂತ ಘೋಡಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಸೇವಾ ಸ್ತಪಾಹದ ಅಂಗವಾಗಿ,ನಗರದ ದುರ್ಗದ ಬೈಲ್ನಲ್ಲಿ ಬಿಜೆಪಿ ವತಿಯಿಂದ, ‘ಡ್ರಗ್ಸ್ ಮುಕ್ತ ಕರ್ನಾಟಕ’ ಮಾದಕ ವಸ್ತು ಹಾಗೂ ವ್ಯಸನ ನಿರ್ಮೂಲನಾ ಜನಜಾಗೃತಿ ಕಾರ್ಯಕ್ರಮ ಶನಿವಾರ ಜರುಗಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ, ‘ಚಿತ್ರರಂಗ ಸೇರಿದಂತೆ, ಸಮಾಜ ಹಲವು ಕ್ಷೇತ್ರಗಳನ್ನು ಮಾದಕ ವಸ್ತು ವ್ಯಾಪಿಸಿದೆ. ಯುವ ಸಮುದಾಯವೇ ಈ ದಂಧೆ ಗುರಿಯಾಗಿರುವುದು ಆತಂಕಕಾರಿ. ಹಾಗಾಗಿ, ಸರ್ಕಾರ ಡ್ರಗ್ಸ್ ಕಡಿವಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ರವೀಂದ್ರ ಮಾತನಾಡಿ, ‘ಕೊರೊನಾ ಸೋಂಕಿನ ಬಗ್ಗೆ ಭಯಗೊಳ್ಳದೆ, ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಕೈಗಳನ್ನು ಆಗಾಗ ತೊಳೆದುಕೊಳ್ಳುವುದು ಹಾಗೂ ಸೂಕ್ತ ಅಂತರ ಕಾಪಾಡಿಕೊಳ್ಳುವುದರಿಂದ ನೆಮ್ಮದಿಯಾಗಿರಬಹುದು’ ಎಂದು ಹೇಳಿದರು.</p>.<p>ಸಹ ಸಂಚಾಲಕ ಡಾ. ಮೃತ್ಯುಂಜಯ, ಹುಡಾ ಸದಸ್ಯ ಚಂದ್ರಶೇಖರ ಗೋಕಾಕ, ಜಗದೀಶ ಬುಳ್ಳಾನವರ, ಮಂಜುನಾಥ ಬಿಜವಾಡ, ಮಲ್ಲಿಕಾರ್ಜುನ ಶಿರಗುಪ್ಪಿ, ಡಾ. ಕಾಟಕರ, ಡಾ. ಗಲಗೆ ಹಾಗೂ ವಕ್ತಾರ ಲಕ್ಷ್ಮೀಕಾಂತ ಘೋಡಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>