ಅಳ್ನಾವರ: ಕಲಘಟಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶನಿವಾರ ಸಮೀಪದ ರಾಮಾಪುರ, ವೀರಾಪುರ, ಕಲ್ಲಾಪುರ ಸೇರಿದಂತೆ ವಿವಿಧ
ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಹಿರಿಯರನ್ನು ಬೇಟ್ಟಿಯಾಗಿ ಮತಯಾಚನೆ ಮಾಡಿದ ಅವರು ಜನರು ನನ್ನ ಮೇಲಿಟ್ಟಿರುವ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡದೆ ಹಗಲಿರುಳು ಕ್ಷೇತ್ರದ ಅಭಿವೃದ್ಧಿ ದುಡಿಯುವದಾಗಿ ಭರವಸೆ ನೀಡಿದರು.