ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪ್ರಚಾರ

Published 23 ಏಪ್ರಿಲ್ 2023, 5:36 IST
Last Updated 23 ಏಪ್ರಿಲ್ 2023, 5:36 IST
ಅಕ್ಷರ ಗಾತ್ರ

ಅಳ್ನಾವರ: ಕಲಘಟಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶನಿವಾರ ಸಮೀಪದ ರಾಮಾಪುರ, ವೀರಾಪುರ, ಕಲ್ಲಾಪುರ ಸೇರಿದಂತೆ ವಿವಿಧ
ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಹಿರಿಯರನ್ನು ಬೇಟ್ಟಿಯಾಗಿ ಮತಯಾಚನೆ ಮಾಡಿದ ಅವರು ಜನರು ನನ್ನ ಮೇಲಿಟ್ಟಿರುವ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡದೆ ಹಗಲಿರುಳು ಕ್ಷೇತ್ರದ ಅಭಿವೃದ್ಧಿ ದುಡಿಯುವದಾಗಿ ಭರವಸೆ ನೀಡಿದರು.

ಕ್ಷೇತ್ರದ ಜನರ ಸಮಸ್ಯೆಗಳನ್ನು ಸರ್ಕಾರದ ಮಟ್ಟಕ್ಕೆ ತಲುಪಿಸುವ ವ್ಯಕ್ತಿ ಶಾಸಕನಾದರೆ ಮಾತ್ರ ಸುಧಾರಣೆ ಕಾಣಲು ಸಾಧ್ಯವಿದೆ ಬಿಜೆಪಿ ಸರ್ಕಾರ ಸಾಕಷ್ಟು ಅನುಧಾನವನ್ನು ಕೊಟ್ಟಿದ್ದು ಅದು ಗೆಲುವಿಗೆ
ಸಹಕಾರಿಯಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಾರ್ಗದರ್ಶನದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ನನಗೊಂದು ಅವಕಾಶ ನೀಡಿ ಆಶೀರ್ವಾದ ಮಾಡುವಂತೆ ಕೋರಿದರು.
ಅಳ್ನಾವರ ಮಂಡಲ ಅಧ್ಯಕ್ಷ ಕಲ್ಮೇಶ ಬೇಲೂರ, ಹಿರಿಯರಾದ ಶಶಿಧರ ಇನಾಮದಾರ, ಬೆಣಚಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಸಂದೀಪ ಪಾಟೀಲ ಹಾಗೂ ಕಾರ್ಯಕರ್ತರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT