ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳಾಗಿವೆ. ಆ ಸಂದರ್ಭಗಳಲ್ಲೆಲ್ಲ ಅವರು ಪ್ರತಿಭಟನೆ ನಡೆಸಿ, ವೋಟ್ ಬ್ಯಾಂಕ್ ಮಾಡಿಕೊಳ್ಳುತ್ತಿದ್ದರು. ಇದೀಗ ಮೌನಕ್ಕೆ ಶರಣಾಗಿದ್ದಾರೆ. ಯಾವುದೇ ಗಲಾಟೆಗೆ ಮುಂದಾಗುತ್ತಿಲ್ಲ, ಅದು ನಮ್ಮ ಪುಣ್ಯ' ಎಂದರು.