'ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಸಾಲ ಪಾವತಿಸುವಂತೆ ಬ್ಯಾಂಕುಗಳಿಂದರೈತರಿಗೆ ನೋಟಿಸ್ಗಳು ಬರುತ್ತಲೇ ಇವೆ. ಮುಖ್ಯಮಂತ್ರಿ ಸುಳ್ಳು ಭರವಸೆ ಕೊಟ್ಟು ಮೋಸ ಮಾಡಿದ್ದಾರೆ. ದಿನಕ್ಕೊಂದು ಹೇಳಿಕೆ ಕೊಟ್ಟು ರೈತರಲ್ಲಿ ಗೊಂದಲು ಸೃಷ್ಟಿಸುತ್ತಿದ್ದಾರೆ. ರೈತ ಮಹಿಳೆಗೆ ಎಲ್ಲಿ ಮಲಗಿದ್ದೆ ಎಂದು ಕೇಳಿದ್ದ ಅವರು, ತಮ್ಮ ಹೇಳಿಕೆಗೆ ಇದುವರೆಗೂ ಕ್ಷಮೆ ಕೇಳಿಲ್ಲ’ ಎಂದು ಟೀಕಿಸಿದರು.