<p><strong>ಹುಬ್ಬಳ್ಳಿ:</strong> ‘ಗ್ರಾಮ ಪಂಚಾಯಿತಿ ಚುನಾವಣೆಗೆ ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ, ನ. 27ರಿಂದ ಡಿ. 7ರವರೆಗೆ ಜಿಲ್ಲೆಗಳ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>‘ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಮತ ಪ್ರವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜಗೊಳಿಸಲಿವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘27ರಂದು ಉಡುಪಿಯಲ್ಲಿ ನಡೆಯುವ ಮೊದಲ ಸಮಾವೇಶವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಪ್ರಮುಖ ಕಾರ್ಯಕರ್ತರು ಮಾತ್ರ ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ, ಪ್ರತಿ ಬೂತ್ನಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನೆ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಬೆಳಗಾವಿಯಲ್ಲಿ ಡಿ. 5ರಂದು ಪಕ್ಷದ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆಗ ಮುಂದಿನ ಸಭೆಯನ್ನು ಎಲ್ಲಿ ನಡೆಸಬೇಕು ಎಂದು ನಿರ್ಧರಿಸಲಾಗುವುದು’ ಎಂದು ಹೇಳಿದರು.</p>.<p>ಪಕ್ಷದ ಮುಖಂಡರಾದ ಲಿಂಗರಾಜ ಪಾಟೀಲ, ಈರಣ್ಣ ಜಡಿ, ಬಸವರಾಜ ಕುಂದಗೋಳಮಠ, ವೀರೇಶ ಸಂಗಳದ, ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ್ ಇದ್ದರು.</p>.<p>* ರೋಲ್ಕಾಲ್ ಹೆಸರಿನ ಕನ್ನಡ ಸಂಘಟನೆಯವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಅದಕ್ಕೆ, ಯಾವುದೇ ಸಾಕ್ಷ್ಯಾಧಾರ ಒದಗಿಸುವ ಅಗತ್ಯವಿಲ್ಲ.</p>.<p><em>– ಅರವಿಂದ ಬೆಲ್ಲದ, ಶಾಸಕ, ಧಾರವಾಡ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಗ್ರಾಮ ಪಂಚಾಯಿತಿ ಚುನಾವಣೆಗೆ ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ, ನ. 27ರಿಂದ ಡಿ. 7ರವರೆಗೆ ಜಿಲ್ಲೆಗಳ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>‘ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಮತ ಪ್ರವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜಗೊಳಿಸಲಿವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘27ರಂದು ಉಡುಪಿಯಲ್ಲಿ ನಡೆಯುವ ಮೊದಲ ಸಮಾವೇಶವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಪ್ರಮುಖ ಕಾರ್ಯಕರ್ತರು ಮಾತ್ರ ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.</p>.<p>‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ, ಪ್ರತಿ ಬೂತ್ನಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನೆ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಬೆಳಗಾವಿಯಲ್ಲಿ ಡಿ. 5ರಂದು ಪಕ್ಷದ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆಗ ಮುಂದಿನ ಸಭೆಯನ್ನು ಎಲ್ಲಿ ನಡೆಸಬೇಕು ಎಂದು ನಿರ್ಧರಿಸಲಾಗುವುದು’ ಎಂದು ಹೇಳಿದರು.</p>.<p>ಪಕ್ಷದ ಮುಖಂಡರಾದ ಲಿಂಗರಾಜ ಪಾಟೀಲ, ಈರಣ್ಣ ಜಡಿ, ಬಸವರಾಜ ಕುಂದಗೋಳಮಠ, ವೀರೇಶ ಸಂಗಳದ, ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ್ ಇದ್ದರು.</p>.<p>* ರೋಲ್ಕಾಲ್ ಹೆಸರಿನ ಕನ್ನಡ ಸಂಘಟನೆಯವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಅದಕ್ಕೆ, ಯಾವುದೇ ಸಾಕ್ಷ್ಯಾಧಾರ ಒದಗಿಸುವ ಅಗತ್ಯವಿಲ್ಲ.</p>.<p><em>– ಅರವಿಂದ ಬೆಲ್ಲದ, ಶಾಸಕ, ಧಾರವಾಡ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>