<p><strong>ಹುಬ್ಬಳ್ಳಿ</strong>: ಭಾಸ್ಕರ್ ಅವರ ಅರ್ಧಶತಕದ ಬಲದಿಂದ ಕರ್ನಾಟಕ ತಂಡವು ಇಂಡಸ್ ಇಂಡ್ ಬ್ಯಾಂಕ್ ‘ನಾಗೇಶ್ ಟ್ರೋಫಿ’ ಅಂಧರ ರಾಷ್ಟ್ರಮಟ್ಟದ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡವನ್ನು ಎಂಟು ವಿಕೆಟ್ಗಳಿಂದ ಮಣಿಸಿತು.</p>.<p>ಇಲ್ಲಿನ ರೈಲ್ವೆ ಮೈದಾನದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಭಾರತ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ವತಿಯಿಂದ ಸೋಮವಾರ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 146 ರನ್ ಗಳಿಸಿತು. ಕರ್ನಾಟಕ ತಂಡವು 11.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿ ಗೆಲುವಿನ ನಗೆ ಬೀರಿತು.</p>.<p>ಆರಂಭಿಕ ಆಟಗಾರ ಭಾಸ್ಕರ್ 46 ಎಸೆತಗಳಲ್ಲಿ 86 ರನ್ (4X15) ರನ್ ಗಳಿಸಿದರು. ಅವರಿಗೆ ರವಿ ಬಂಡಿವಡ್ಡರ್ 32 (22ಎ, 4X6) ಉತ್ತಮ ಜತೆ ನೀಡಿದರು.</p>.<p>ಕರ್ನಾಟಕ ತಂಡದ ಸುನಿಲ್ ರಮೇಶ್ (17ಕ್ಕೆ 2) ಅವರ ಬಿಗಿ ಬೌಲಿಂಗ್ನಿಂದಾಗಿ ಮಹಾರಾಷ್ಟ್ರ ತಂಡಕ್ಕೆ ಬೃಹತ್ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ಅನಿಲ್ ಬೆಲ್ಸಾರೆ 70 (58 ಎ, 4X7) ಅವರು ತಾಳ್ಮೆಯ ಆಟವಾಡಿ ತಂಡವು ಅಲ್ಪಮೊತ್ತಕ್ಕೆ ಕುಸಿಯದಂತೆ ನೋಡಿಕೊಂಡರು.</p>.<p>ಇನ್ನೊಂದು ಪಂದ್ಯದಲ್ಲಿ ಕೇರಳ ತಂಡವು 10 ರನ್ಗಳಿಂದ ಹಿಮಾಚಲ ಪ್ರದೇಶ ತಂಡದ ಎದುರು ಜಯಿಸಿತು. ಟೂರ್ನಿಯಲ್ಲಿ ರಾಜಸ್ಥಾನ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕ ತಂಡಗಳು ಭಾಗವಹಿಸಿವೆ.</p>.<p><strong>ಸಂಕ್ಷಿಪ್ತ ಸ್ಕೋರು</strong>: ಮಹಾರಾಷ್ಟ್ರ: 20 ಓವರ್ಗಳಲ್ಲಿ 8 ವಿಕೆಟ್ಗೆ 146 (ಅನಿಲ್ ಬೆಲ್ಸಾರೆ 70, ಅಶುತೋಷ್ 16; ಸುನಿಲ್ ರಮೇಶ್ 17ಕ್ಕೆ 2). ಕರ್ನಾಟಕ: 11.3 ಓವರ್ಗಳಲ್ಲಿ 2ಕ್ಕೆ 148 (ಭಾಸ್ಕರ್ 86, ರವಿ ಬಂಡಿವಡ್ಡರ್ 32). ಪಂದ್ಯಶ್ರೇಷ್ಠ: ಭಾಸ್ಕರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಭಾಸ್ಕರ್ ಅವರ ಅರ್ಧಶತಕದ ಬಲದಿಂದ ಕರ್ನಾಟಕ ತಂಡವು ಇಂಡಸ್ ಇಂಡ್ ಬ್ಯಾಂಕ್ ‘ನಾಗೇಶ್ ಟ್ರೋಫಿ’ ಅಂಧರ ರಾಷ್ಟ್ರಮಟ್ಟದ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡವನ್ನು ಎಂಟು ವಿಕೆಟ್ಗಳಿಂದ ಮಣಿಸಿತು.</p>.<p>ಇಲ್ಲಿನ ರೈಲ್ವೆ ಮೈದಾನದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಭಾರತ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ವತಿಯಿಂದ ಸೋಮವಾರ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 146 ರನ್ ಗಳಿಸಿತು. ಕರ್ನಾಟಕ ತಂಡವು 11.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿ ಗೆಲುವಿನ ನಗೆ ಬೀರಿತು.</p>.<p>ಆರಂಭಿಕ ಆಟಗಾರ ಭಾಸ್ಕರ್ 46 ಎಸೆತಗಳಲ್ಲಿ 86 ರನ್ (4X15) ರನ್ ಗಳಿಸಿದರು. ಅವರಿಗೆ ರವಿ ಬಂಡಿವಡ್ಡರ್ 32 (22ಎ, 4X6) ಉತ್ತಮ ಜತೆ ನೀಡಿದರು.</p>.<p>ಕರ್ನಾಟಕ ತಂಡದ ಸುನಿಲ್ ರಮೇಶ್ (17ಕ್ಕೆ 2) ಅವರ ಬಿಗಿ ಬೌಲಿಂಗ್ನಿಂದಾಗಿ ಮಹಾರಾಷ್ಟ್ರ ತಂಡಕ್ಕೆ ಬೃಹತ್ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ಅನಿಲ್ ಬೆಲ್ಸಾರೆ 70 (58 ಎ, 4X7) ಅವರು ತಾಳ್ಮೆಯ ಆಟವಾಡಿ ತಂಡವು ಅಲ್ಪಮೊತ್ತಕ್ಕೆ ಕುಸಿಯದಂತೆ ನೋಡಿಕೊಂಡರು.</p>.<p>ಇನ್ನೊಂದು ಪಂದ್ಯದಲ್ಲಿ ಕೇರಳ ತಂಡವು 10 ರನ್ಗಳಿಂದ ಹಿಮಾಚಲ ಪ್ರದೇಶ ತಂಡದ ಎದುರು ಜಯಿಸಿತು. ಟೂರ್ನಿಯಲ್ಲಿ ರಾಜಸ್ಥಾನ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕ ತಂಡಗಳು ಭಾಗವಹಿಸಿವೆ.</p>.<p><strong>ಸಂಕ್ಷಿಪ್ತ ಸ್ಕೋರು</strong>: ಮಹಾರಾಷ್ಟ್ರ: 20 ಓವರ್ಗಳಲ್ಲಿ 8 ವಿಕೆಟ್ಗೆ 146 (ಅನಿಲ್ ಬೆಲ್ಸಾರೆ 70, ಅಶುತೋಷ್ 16; ಸುನಿಲ್ ರಮೇಶ್ 17ಕ್ಕೆ 2). ಕರ್ನಾಟಕ: 11.3 ಓವರ್ಗಳಲ್ಲಿ 2ಕ್ಕೆ 148 (ಭಾಸ್ಕರ್ 86, ರವಿ ಬಂಡಿವಡ್ಡರ್ 32). ಪಂದ್ಯಶ್ರೇಷ್ಠ: ಭಾಸ್ಕರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>