ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ ಪ್ರಾಣದಾನಕ್ಕೆ‌ ಸಮ: ಮಾರುತಿ ಬಾಗಡೆ

Last Updated 9 ನವೆಂಬರ್ 2021, 9:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೈದ್ಯಕೀಯ ಸಂಕಷ್ಟದ ಸಂದರ್ಭದಲ್ಲಿ ರಕ್ತ ಅಗತ್ಯವಾಗಿರುತ್ತದೆ. ರಕ್ತದಾನ ಮಾಡುವುದು ಪ್ರಾಣದಾನ ಮಾಡುವುದಕ್ಕೆ ಸಮ ಎಂದು ಜಿಲ್ಲಾ ನ್ಯಾಯಾಧೀಶರಾದ ಮಾರುತಿ ಬಾಗಡೆ ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಿಮ್ಸ್, ಪೊಲೀಸ್ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ‌ದಲ್ಲಿ ಮಂಗಳವಾರ 75ನೇ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

‘ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕು. ಅಪಘಾತ, ಹೆರಿಗೆ, ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ‌ ರಕ್ತ, ಕೆಂಪು ರಕ್ತ ಕಣಗಳು, ಪ್ಲಾಸ್ಮಾ ಅವಶ್ಯಕವಾಗಿ ಬೇಕಾಗುತ್ತವೆ’ ಎಂದರು.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರವೀಂದ್ರ.ಡಿ. ಅರಿ, ನ್ಯಾಯಾಧೀಶರಾದ ದೇವೆಂದ್ರಪ್ಪ ಎನ್. ಬಿರಾದಾರ, ಕೆ.ಎನ್.ಗಂಗಾಧರ, ವಕೀಲರ ಸಂಘದ ಅಧ್ಯಕ್ಷ ಸಿ.ಆರ್.ಪಾಟೀಲ, ಕಿಮ್ಸ್ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಅನಿಲ ಕುಮಾರ್ ಪಿ.ಎಸ್ ಇದ್ದರು.

ನ್ಯಾಯಾಧೀಶ ರಾಜಶೇಖರ ಎಂ‌ ತಿಲಗಂಜಿ, ಪೊಲೀಸ್ ಇನ್ಸ್‌ಪೆಕ್ಟರ್‌ ಜಗದೀಶ ಹಂಚಿನಾಳ, ವಕೀಲ ಐ‌.ಕೆ. ಬೆಳಗಲಿ ಸೇರಿದಂತೆ ಹಲವರು ರಕ್ತದಾನ ಮಾಡಿದರು. ಆಯ್ಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT