ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಚ್. ಸಚ್ಚಿದಾನಂದಮೂರ್ತಿ ಮಾತನಾಡಿ, ‘ಸಮುದಾಯಕ್ಕಾಗಿ ಯಾವ ಕೆಲಸವನ್ನೂ ಮಾಡದ ಅಶೋಕ ಹಾರನಹಳ್ಳಿ ಮತ್ತು ಆರ್. ಲಕ್ಷ್ಮೀಕಾಂತ್, ಮಹಾಸಭಾ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ತಮ್ಮ ವ್ಯಾಪಾರ-ಉದ್ಯಮ ನಡೆಸಿಕೊಂಡು ಬರುತ್ತಿದ್ದಾರೆ. ಅಂತಹವರ ಬದಲು, ಸಮುದಾಯದ ಅಭಿವೃದ್ಧಿಗೆ ದುಡಿಯಬಲ್ಲ ರಘುನಾಥ್ ಅವರನ್ನು ಎಲ್ಲರೂ ಬೆಂಬಲಿಸಬೇಕು’ ಎಂದು ಹೇಳಿದರು.