ಇಲ್ಲಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ (ಗುರುತು ಬಹಿರಂಗ ಪಡಿಸಲು ಪಾಲಕರು ಸಮ್ಮತಿಸಿಲ್ಲ) ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಿಸಿದರು. ಅಂಗಾಂಗ ದಾನ ಕುರಿತು ವೈದ್ಯರು ಪಾಲಕರ ಮನವೊಲಿಸಿದರು.
ಇದರ ಫಲವಾಗಿ ಹೃದಯ, 2 ಮೂತ್ರಪಿಂಡ, ಕಣ್ಣುಗಳು ಹಾಗೂ ಯಕೃತ್ ಆರು ಜನರ ಬದುಕಿಗೆ ಅಸರೆಯಾಗಿವೆ.
ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ, ಯಕೃತ್ ಬೆಂಗಳೂರು, ಮೂತ್ರಪಿಂಡ ಎಸ್ ಡಿಎಂ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ನಿರೀಕ್ಷೆಯಲ್ಲಿರುವವರಿಗಾಗಿ ನೀಡಲಾಗುತ್ತಿದೆ. ಬೆಳಗಾವಿಗೆ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣವರೆಗೆ ಜೀರೋ ಟ್ರಾಫಿಕ್ ಮೂಲಕ ಅಂಗಾಂಗ ಸಾಗಿಸಲಾಗುತ್ತಿದೆ. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.