ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಮಂಡನೆ ಖಚಿತ: ನಾಡಗೌಡ

Last Updated 29 ಜೂನ್ 2018, 11:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಜೆಟ್‌ ಮಂಡನೆಗೆ ಯಾರದ್ದೂ ವಿರೋಧ ಇಲ್ಲ. ಜುಲೈ 5 ರಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಜೆಟ್‌ ಮಂಡಿಸಲಿದ್ದಾರೆ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಬೆಳಗಾವಿಗೆ ತೆರಳುವ ಮುನ್ನ ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಮಂಡನೆ ಬಗ್ಗೆ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ. ಮಂಡನೆ ಮಾಡುವುದು ಬೇಡ ಎಂದು ಎಲ್ಲಿಯೂ ಹೇಳಿಲ್ಲ ಎಂದರು.

ಸರ್ಕಾರ ಟೇಕ್‌ ಆಫ್‌ ಆಗಿಲ್ಲ ಎಂಬ ಪ್ರತಿಪಕ್ಷ ನಾಯಕರ ಆರೋಪದಲ್ಲಿ ಹುರುಳಿಲ್ಲ. ಸರ್ಕಾರ ಟೇಕ್‌ ಆಫ್‌ ಆಗಿದ್ದು, ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಆರಂಭವಾಗಿದೆ. ಐದು ವರ್ಷ ಸರ್ಕಾರ ಇರಲಿದೆ ಎಂದು ಹೇಳಿದರು.

ಇಲಾಖೆಯಲ್ಲಿ ಪಶು ವೈದ್ಯರ ಕೊರತೆ ಇದೆ. ಶೀಘ್ರದಲ್ಲಿಯೇ 500 ಪಶು ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು. ಬಜೆಟ್‌ನಲ್ಲಿ ಇಲಾಖೆಗೆ 2,500 ಕೋಟಿ ಅನುದಾನ ನೀಡುವಂತೆ ಕೇಳಿದ್ದೇನೆ. ಇಸ್ರೇಲ್‌ ತಂತ್ರಜ್ಞಾನದಲ್ಲಿ ಮೇವು ಬೆಳೆಯಲು ಯೋಜಿಸಲಾಗಿದೆ. ಆಗ, ಜಮೀನು ಇಲ್ಲದವರೂ ಹೈನುಗಾರಿಕೆಯ ಮಾಡಬಹುದಾಗಿದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT