ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ವಿಚಾರವನ್ನು ಸಿದ್ದರಾಮಯ್ಯ ರಾಜಕೀಯ ಉದ್ದೇಶದಿಂದ ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸೇಡಿನ ರಾಜಕಾರಣ ಮಾಡಿಲ್ಲ.ತಪ್ಪು ಮಾಡಿಲ್ಲವೆಂದರೆ ಶಿವಕುಮಾರ್ ಇಡಿ ವಿಚಾರಣೆ ಎದುರಿಸಲಿ ಬಿಡಿ; ವಿಚಾರಣೆಯೂ ಮಾಡಬಾರದು ಎಂದರೆ ಹೇಗೆ’ ಎಂದು ಪ್ರಶ್ನಿಸಿದರು.