<p><strong>ಕಲಘಟಗಿ:</strong> ಹಲವು ವರ್ಷಗಳಿಂದ ಸಮರ್ಪಕ ಬಸ್ ಸೌಲಭ್ಯವಿಲ್ಲದ ಬಸವರ್ಶಿಕೊಪ್ಪ, ಕಳಸನಕೊಪ್ಪ ಗ್ರಾಮಕ್ಕೆ ಬಸ್ ಸಂಚಾರ ಆರಂಭವಾಗಿದ್ದು, ಗ್ರಾಮಸ್ಥರು ಬಸ್ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ತಾಲ್ಲೂಕಿನ ನೀರಸಾಗರ, ಬಸವರ್ಶಿಕೊಪ್ಪ, ಕನ್ನೇನಾಯಕನಕೊಪ್ಪ ಮತ್ತು ಕಳಸನಕೊಪ್ಪ ಗ್ರಾಮಕ್ಕೆ ಹುಬ್ಬಳ್ಳಿ ಹಾಗೂ ಕಲಘಟಗಿ ಮಾರ್ಗವಾಗಿ ಬಸ್ ಸೌಕರ್ಯವಿಲ್ಲದೆ ಸಮಸ್ಯೆ ಉಂಟಾಗಿತ್ತು. ಈ ತೊಂದರೆ ನಿವಾರಿಸಲು ಸಚಿವ ಸಂತೋಷ ಲಾಡ್ ಅವರು ಸೂಚಿಸಿದ್ದರು.</p>.<p>ಬಸವರ್ಶಿಕೊಪ್ಪ ಗ್ರಾಮಕ್ಕೆ ಬಂದ ಬಸ್ ಅನ್ನು ತೋರಣಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ ಹಾಗೂ ಬಸ್ ಚಾಲಕರನ್ನು ಸನ್ಮಾನಿಸಲಾಯಿತು.</p>.<p>ಗ್ರಾಮದ ಚಂದ್ರಮನಿ ದಾದಾಗೌಡ, ಅರ್ಜುನ ಅಂಗಡಿ, ಚನ್ನಬಸಯ್ಯ ಹುಬ್ಬಳ್ಳಿಮಠ, ಚಂದ್ರಶೇಖರ ಹಡಪದ, ಅಶೋಕ ಉಣಕಲ್ಲ, ಯಲ್ಲಪ್ಪ ಶಿರಗುಪ್ಪ, ಅಜ್ಜಪ್ಪ ವಾಲಿಕಾರ, ಬಸವರಾಜ ಗೌರಿ, ಸುರೇಶ ದೊಡ್ಡಮನಿ, ಲಿಂಗನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ಹಲವು ವರ್ಷಗಳಿಂದ ಸಮರ್ಪಕ ಬಸ್ ಸೌಲಭ್ಯವಿಲ್ಲದ ಬಸವರ್ಶಿಕೊಪ್ಪ, ಕಳಸನಕೊಪ್ಪ ಗ್ರಾಮಕ್ಕೆ ಬಸ್ ಸಂಚಾರ ಆರಂಭವಾಗಿದ್ದು, ಗ್ರಾಮಸ್ಥರು ಬಸ್ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ತಾಲ್ಲೂಕಿನ ನೀರಸಾಗರ, ಬಸವರ್ಶಿಕೊಪ್ಪ, ಕನ್ನೇನಾಯಕನಕೊಪ್ಪ ಮತ್ತು ಕಳಸನಕೊಪ್ಪ ಗ್ರಾಮಕ್ಕೆ ಹುಬ್ಬಳ್ಳಿ ಹಾಗೂ ಕಲಘಟಗಿ ಮಾರ್ಗವಾಗಿ ಬಸ್ ಸೌಕರ್ಯವಿಲ್ಲದೆ ಸಮಸ್ಯೆ ಉಂಟಾಗಿತ್ತು. ಈ ತೊಂದರೆ ನಿವಾರಿಸಲು ಸಚಿವ ಸಂತೋಷ ಲಾಡ್ ಅವರು ಸೂಚಿಸಿದ್ದರು.</p>.<p>ಬಸವರ್ಶಿಕೊಪ್ಪ ಗ್ರಾಮಕ್ಕೆ ಬಂದ ಬಸ್ ಅನ್ನು ತೋರಣಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ ಹಾಗೂ ಬಸ್ ಚಾಲಕರನ್ನು ಸನ್ಮಾನಿಸಲಾಯಿತು.</p>.<p>ಗ್ರಾಮದ ಚಂದ್ರಮನಿ ದಾದಾಗೌಡ, ಅರ್ಜುನ ಅಂಗಡಿ, ಚನ್ನಬಸಯ್ಯ ಹುಬ್ಬಳ್ಳಿಮಠ, ಚಂದ್ರಶೇಖರ ಹಡಪದ, ಅಶೋಕ ಉಣಕಲ್ಲ, ಯಲ್ಲಪ್ಪ ಶಿರಗುಪ್ಪ, ಅಜ್ಜಪ್ಪ ವಾಲಿಕಾರ, ಬಸವರಾಜ ಗೌರಿ, ಸುರೇಶ ದೊಡ್ಡಮನಿ, ಲಿಂಗನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>