<p><strong>ಹುಬ್ಬಳ್ಳಿ: </strong>ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಶುಕ್ರವಾರ ಹುಬ್ಬಳ್ಳಿಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.</p>.<p>ಬೆಳಿಗ್ಗೆ ಎಂದಿನಂತೆ ಬಸ್ ಸಂಚಾರ ಆರಂಭಿಸಲಾಗಿತ್ತು. ಜನರು ಕಾರ್ಯ ನಿಮಿತ್ತ ಹೊರಟಿದ್ದರು. ಬೇರೆ ಊರುಗಳಿಂದಲೂ ಜನರು ಹುಬ್ಬಳ್ಳಿಗೆ ಆಗಮಿಸಿದ್ದರು. ದಿಢೀರ್ ಎಂದು ಬಸ್ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ವಿವಿಧೆಡೆ ತೆರಳಬೇಕಿದ್ದ ಪ್ರಯಾಣಿಕರು ಗೊಂದಲಕ್ಕೆ ಒಳಗಾದರು.</p>.<p>ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಗಳನ್ನು ಡಿಪೊಗಳಿಗೆ ಕಳುಹಿಸಲಾಯಿತು. ಬಸ್ ಕಾಯ್ದುಕೊಂಡು ಮಕ್ಕಳ ಸಮೇತ ಹಲವಾರು ಪ್ರಯಾಣಿಕರು ಮಧ್ಯಾಹ್ನದವರೆಗೂ ನಿಲ್ದಾಣದಲ್ಲಿಯೇ ಕುಳಿತಿದ್ದರು.</p>.<p>ಬಾಗಲಕೋಟೆಯಿಂದ ಮುಂಡಗೋಡಕ್ಕೆ ಹೋಗಲು ಹುಬ್ಬಳ್ಳಿಗೆ ಬಂದಿದ್ದ ದಂಪತಿ, ಮುಂಡಗೋಡಕ್ಕೂ, ಮರಳಿ ಬಾಗಲಕೋಟೆಗೂ ಬಸ್ ಇಲ್ಲದೆ ಹುಬ್ಬಳ್ಳಿ ನಿಲ್ದಾಣದಲ್ಲಿಯೇ ಕಾದು ಕುಳಿತಿದ್ದರು. ಇದೇ ರೀತಿ ಹಲವರು ಬೇರೆ ಊರುಗಳಲ್ಲಿ ತೆರಳು ಕಾದು ಕುಳಿತಿದ್ದರು.</p>.<p>ಆರಂಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಬಿಆರ್ಟಿಎಸ್ ಬಸ್ಗಳ ಸಂಚಾರ ಬೆಳಿಗ್ಗೆ ಎಂದಿನಂತೆ ಇತ್ತು. ನಂತರ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ಅವಳಿ ನಗರಗಳ ನಡುವೆ ಸಂಚರಿಸುವ ಪ್ರಯಾಣಿಕರು ತೊಂದರೆ ಎದುರಿಸಬೇಕಾಯಿತು.</p>.<p><strong>ಸಿಟಿ ಬಸ್ಗಳ ಸಂಚಾರ ಕಡಿಮೆ: </strong>ಬೇರೆ ಊರುಗಳಿಗೆ ತೆರಳುತ್ತಿದ್ದ ಬಸ್ ಸಂಚಾರ ಸ್ಥಗಿತಗೊಂಡಿದ್ದರೂ, ಸಿಟಿ ಬಸ್ಗಳ ಸಂಚಾರ ಮಾತ್ರ ಎಂದಿನಂತೆ ಮಧ್ಯಾಹ್ನದವರೆಗೂ ಮುಂದುವರೆದಿತ್ತು. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್ಗಳನ್ನು ಬಿಡಲಾಗುತ್ತಿತ್ತು.</p>.<p>‘ಬೆಳಿಗ್ಗೆ ಹುಬ್ಬಳ್ಳಿಯಿಂದ ಬೇರೆ, ಬೇರೆ ಊರುಗಳಿಗೆ ತೆರಳುವ 120 ವಾಹನಗಳು ಹೊರಟಿವೆ. ನಂತರದಲ್ಲಿ ಬಸ್ ಸಂಚರಿಸುತ್ತಿಲ್ಲ. ಚಾಲಕರು ಹಾಗೂ ನಿವಾರ್ಹಕರು ಕರ್ತವ್ಯಕ್ಕೆ ಬಂದಿಲ್ಲ. ಸರ್ಕಾರ ಮಟ್ಟದಲ್ಲಿ ಮಾತುಕತೆ ನಡೆದಿದೆ’ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಶುಕ್ರವಾರ ಹುಬ್ಬಳ್ಳಿಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.</p>.<p>ಬೆಳಿಗ್ಗೆ ಎಂದಿನಂತೆ ಬಸ್ ಸಂಚಾರ ಆರಂಭಿಸಲಾಗಿತ್ತು. ಜನರು ಕಾರ್ಯ ನಿಮಿತ್ತ ಹೊರಟಿದ್ದರು. ಬೇರೆ ಊರುಗಳಿಂದಲೂ ಜನರು ಹುಬ್ಬಳ್ಳಿಗೆ ಆಗಮಿಸಿದ್ದರು. ದಿಢೀರ್ ಎಂದು ಬಸ್ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ವಿವಿಧೆಡೆ ತೆರಳಬೇಕಿದ್ದ ಪ್ರಯಾಣಿಕರು ಗೊಂದಲಕ್ಕೆ ಒಳಗಾದರು.</p>.<p>ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಗಳನ್ನು ಡಿಪೊಗಳಿಗೆ ಕಳುಹಿಸಲಾಯಿತು. ಬಸ್ ಕಾಯ್ದುಕೊಂಡು ಮಕ್ಕಳ ಸಮೇತ ಹಲವಾರು ಪ್ರಯಾಣಿಕರು ಮಧ್ಯಾಹ್ನದವರೆಗೂ ನಿಲ್ದಾಣದಲ್ಲಿಯೇ ಕುಳಿತಿದ್ದರು.</p>.<p>ಬಾಗಲಕೋಟೆಯಿಂದ ಮುಂಡಗೋಡಕ್ಕೆ ಹೋಗಲು ಹುಬ್ಬಳ್ಳಿಗೆ ಬಂದಿದ್ದ ದಂಪತಿ, ಮುಂಡಗೋಡಕ್ಕೂ, ಮರಳಿ ಬಾಗಲಕೋಟೆಗೂ ಬಸ್ ಇಲ್ಲದೆ ಹುಬ್ಬಳ್ಳಿ ನಿಲ್ದಾಣದಲ್ಲಿಯೇ ಕಾದು ಕುಳಿತಿದ್ದರು. ಇದೇ ರೀತಿ ಹಲವರು ಬೇರೆ ಊರುಗಳಲ್ಲಿ ತೆರಳು ಕಾದು ಕುಳಿತಿದ್ದರು.</p>.<p>ಆರಂಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಬಿಆರ್ಟಿಎಸ್ ಬಸ್ಗಳ ಸಂಚಾರ ಬೆಳಿಗ್ಗೆ ಎಂದಿನಂತೆ ಇತ್ತು. ನಂತರ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ಅವಳಿ ನಗರಗಳ ನಡುವೆ ಸಂಚರಿಸುವ ಪ್ರಯಾಣಿಕರು ತೊಂದರೆ ಎದುರಿಸಬೇಕಾಯಿತು.</p>.<p><strong>ಸಿಟಿ ಬಸ್ಗಳ ಸಂಚಾರ ಕಡಿಮೆ: </strong>ಬೇರೆ ಊರುಗಳಿಗೆ ತೆರಳುತ್ತಿದ್ದ ಬಸ್ ಸಂಚಾರ ಸ್ಥಗಿತಗೊಂಡಿದ್ದರೂ, ಸಿಟಿ ಬಸ್ಗಳ ಸಂಚಾರ ಮಾತ್ರ ಎಂದಿನಂತೆ ಮಧ್ಯಾಹ್ನದವರೆಗೂ ಮುಂದುವರೆದಿತ್ತು. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್ಗಳನ್ನು ಬಿಡಲಾಗುತ್ತಿತ್ತು.</p>.<p>‘ಬೆಳಿಗ್ಗೆ ಹುಬ್ಬಳ್ಳಿಯಿಂದ ಬೇರೆ, ಬೇರೆ ಊರುಗಳಿಗೆ ತೆರಳುವ 120 ವಾಹನಗಳು ಹೊರಟಿವೆ. ನಂತರದಲ್ಲಿ ಬಸ್ ಸಂಚರಿಸುತ್ತಿಲ್ಲ. ಚಾಲಕರು ಹಾಗೂ ನಿವಾರ್ಹಕರು ಕರ್ತವ್ಯಕ್ಕೆ ಬಂದಿಲ್ಲ. ಸರ್ಕಾರ ಮಟ್ಟದಲ್ಲಿ ಮಾತುಕತೆ ನಡೆದಿದೆ’ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>