ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸಮ್ಮೇಳನದ ಅಧ್ಯಕ್ಷರಾಗಿ ಸಿ.ಬಿ. ಮರಿಗೌಡ್ರ ಆಯ್ಕೆ

Last Updated 3 ಫೆಬ್ರುವರಿ 2023, 5:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಹುಬ್ಬಳ್ಳಿ ನಗರ ತಾಲ್ಲೂಕು ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ, ನಗರದ ಉಣಕಲ್ಲದ ಸಾಹಿತಿ ಸಿ.ಬಿ. ಮರಿಗೌಡ್ರ ಅವರನ್ನು ಹುಬ್ಬಳ್ಳಿ ನಗರ ತಾಲ್ಲೂಕಿನ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರ ಅಧ್ಯಕ್ಷತೆ ಮತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಎಸ್. ಕೌಜಲಗಿ ಉಪಸ್ಥಿತಿಯಲ್ಲಿ ಜರುಗಿದ ಸಭೆಯಲ್ಲಿ ಮರಿಗೌಡ್ರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅವರ ಮನೆಗೆ ತೆರಳಿ ಸಮ್ಮೇಳನದ ಅಧ್ಯಕ್ಷತೆಯನ್ನು ಒಪ್ಪಿಕೊಳ್ಳುವಂತೆ ಮನವಿ ಮಾಡಲಾಯಿತು. ಸಮ್ಮೇಳನದ ದಿನಾಂಕವನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಪರಿಷತ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಗುರುಸಿದ್ದಪ್ಪ ಬಡಿಗೇರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT