<p><strong>ತಿಕೋಟಾ</strong>: ಹಿಂದೂ ಧರ್ಮ ಜಗತ್ತಿಗೆ ಸಂಸ್ಕೃತಿ, ಆಚಾರ–ವಿಚಾರ, ನಾಗರಿಕತೆಯ ಬದುಕು ಹೇಳಿಕೊಟ್ಟಿದೆ. ನಮ್ಮ ದೇಶದಲ್ಲಿ ಹಿಂದೂ ಧರ್ಮ ಉಳಿಯಬೇಕೆಂದರೆ ನಾವು ಸಂಘಟಿತರಾಗಬೇಕು ಎಂದು ಆರ್ಎಸ್ಎಸ್ ಉತ್ತರ ಕರ್ನಾಟಕದ ಸಹ ಪ್ರಾಂತ ಸಂಚಾಲಕ ಶ್ರೀನಿವಾಸ ನಾಯ್ಕ ಹೇಳಿದರು.</p>.<p>ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ಆರ್.ಎಸ್.ಎಸ್. ನೂರು ವರ್ಷ ಆಚರಣೆ ನಿಮಿತ್ತ ತಿಕೋಟಾ ಮಂಡಲ ವತಿಯಿಂದ ಸೋಮವಾರ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಸದ್ಯ ನಡೆಯುತ್ತಿರುವ ಹಿಂದೂ ಸಮಾವೇಶ ಯಾರ ವಿರುದ್ಧವೂ ಅಲ್ಲ. ಸಮಾಜದಲ್ಲಿ ಒಗ್ಗಟ್ಟಿನಿಂದ ಬಾಳಬೇಕಿದೆ. ದೇಶದಲ್ಲಿ ಆಯಾ ಧರ್ಮಕ್ಕೆ ಅನುಗುಣವಾಗಿ ತಮ್ಮ ಮನೆಗಳಲ್ಲಿ ಪೂಜೆ ಮಾಡುತ್ತಾರೆ. ಆದರೂ ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂಬ ಮನೋಭಾವ ಎಲ್ಲರಲ್ಲಿ ಬರಬೇಕು’ ಎಂದರು.</p>.<p>‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಗೋಳ್ಳಿ ರಾಯಣ್ಣ, ಕಿತ್ತೂರ ರಾಣಿ ಚನ್ನಮ್ಮ, ಸಿಂಧೂರ ಲಕ್ಷ್ಮಣ, ವೀರ ಸಾರ್ವಕರ್ ಇವರೆಲ್ಲ ದೇಶದ ಏಳ್ಗೆಗಾಗಿ ಪ್ರಾಣ ಕೊಟ್ಟರು. ಇವರಲ್ಲಿ ಜಾತಿ–ಭೇದ ಇರಲಿಲ್ಲ. ಈಗ ಎಲ್ಲ ಜಾತಿಯವರನ್ನು ಒಗ್ಗೂಡಿಸುವ ಕೆಲಸವಾಗಬೇಕು’ ಎಂದು ಹೇಳಿದರು.</p>.<p>ಮನಗೂಳಿಯ ಸಂಗನಬಸವ ಶಿವಾಚಾರ್ಯರು, ತಿಕೋಟಾ ಹಿರೇಮಠದ ಶಿವಬಸವ ಶಿವಾಚಾರ್ಯರು, ವಿರಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮಿಜಿ, ರಾಂಪುರ ಚಂದ್ರಗಿರಿಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿದರು.</p>.<p>ಮಹಾನ್ ಸಂತರ ಹಾಗೂ ನಾಯಕರ ಭಾವಚಿತ್ರಗಳನ್ನು ಎತ್ತಿನ ಗಾಡಿಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದ ಅದ್ಯಕ್ಷ ರಾಜು ಚೌಧರಿ, ಉಪಾಧ್ಯಕ್ಷ ಮಾನಿಂಗ ಮಂಟೂರ, ಸುರೇಶ ಕೊಣ್ಣೂರ, ಸಿದ್ರಾಮ ಪೂಜಾರಿ, ರಾಜೇಂದ್ರ ಕುಲಕರ್ಣಿ, ಚಂದ್ರಕಾಂತ ತೊರವಿ, ಎಂ.ಎಸ್.ಜತ್ತಿ, ರಾವತ ಕಂಬಾರ, ಗೀತಾ ತಾಳಿಕೋಟಿ, ಮುತ್ತು ಲಂಗೂಟಿ, ಲೇಪೂ ಕೊಣ್ಣೂರ, ಶ್ರೀಕಾಂತ ಪರನಾಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಕೋಟಾ</strong>: ಹಿಂದೂ ಧರ್ಮ ಜಗತ್ತಿಗೆ ಸಂಸ್ಕೃತಿ, ಆಚಾರ–ವಿಚಾರ, ನಾಗರಿಕತೆಯ ಬದುಕು ಹೇಳಿಕೊಟ್ಟಿದೆ. ನಮ್ಮ ದೇಶದಲ್ಲಿ ಹಿಂದೂ ಧರ್ಮ ಉಳಿಯಬೇಕೆಂದರೆ ನಾವು ಸಂಘಟಿತರಾಗಬೇಕು ಎಂದು ಆರ್ಎಸ್ಎಸ್ ಉತ್ತರ ಕರ್ನಾಟಕದ ಸಹ ಪ್ರಾಂತ ಸಂಚಾಲಕ ಶ್ರೀನಿವಾಸ ನಾಯ್ಕ ಹೇಳಿದರು.</p>.<p>ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ಆರ್.ಎಸ್.ಎಸ್. ನೂರು ವರ್ಷ ಆಚರಣೆ ನಿಮಿತ್ತ ತಿಕೋಟಾ ಮಂಡಲ ವತಿಯಿಂದ ಸೋಮವಾರ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಸದ್ಯ ನಡೆಯುತ್ತಿರುವ ಹಿಂದೂ ಸಮಾವೇಶ ಯಾರ ವಿರುದ್ಧವೂ ಅಲ್ಲ. ಸಮಾಜದಲ್ಲಿ ಒಗ್ಗಟ್ಟಿನಿಂದ ಬಾಳಬೇಕಿದೆ. ದೇಶದಲ್ಲಿ ಆಯಾ ಧರ್ಮಕ್ಕೆ ಅನುಗುಣವಾಗಿ ತಮ್ಮ ಮನೆಗಳಲ್ಲಿ ಪೂಜೆ ಮಾಡುತ್ತಾರೆ. ಆದರೂ ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂಬ ಮನೋಭಾವ ಎಲ್ಲರಲ್ಲಿ ಬರಬೇಕು’ ಎಂದರು.</p>.<p>‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂಗೋಳ್ಳಿ ರಾಯಣ್ಣ, ಕಿತ್ತೂರ ರಾಣಿ ಚನ್ನಮ್ಮ, ಸಿಂಧೂರ ಲಕ್ಷ್ಮಣ, ವೀರ ಸಾರ್ವಕರ್ ಇವರೆಲ್ಲ ದೇಶದ ಏಳ್ಗೆಗಾಗಿ ಪ್ರಾಣ ಕೊಟ್ಟರು. ಇವರಲ್ಲಿ ಜಾತಿ–ಭೇದ ಇರಲಿಲ್ಲ. ಈಗ ಎಲ್ಲ ಜಾತಿಯವರನ್ನು ಒಗ್ಗೂಡಿಸುವ ಕೆಲಸವಾಗಬೇಕು’ ಎಂದು ಹೇಳಿದರು.</p>.<p>ಮನಗೂಳಿಯ ಸಂಗನಬಸವ ಶಿವಾಚಾರ್ಯರು, ತಿಕೋಟಾ ಹಿರೇಮಠದ ಶಿವಬಸವ ಶಿವಾಚಾರ್ಯರು, ವಿರಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮಿಜಿ, ರಾಂಪುರ ಚಂದ್ರಗಿರಿಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿದರು.</p>.<p>ಮಹಾನ್ ಸಂತರ ಹಾಗೂ ನಾಯಕರ ಭಾವಚಿತ್ರಗಳನ್ನು ಎತ್ತಿನ ಗಾಡಿಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದ ಅದ್ಯಕ್ಷ ರಾಜು ಚೌಧರಿ, ಉಪಾಧ್ಯಕ್ಷ ಮಾನಿಂಗ ಮಂಟೂರ, ಸುರೇಶ ಕೊಣ್ಣೂರ, ಸಿದ್ರಾಮ ಪೂಜಾರಿ, ರಾಜೇಂದ್ರ ಕುಲಕರ್ಣಿ, ಚಂದ್ರಕಾಂತ ತೊರವಿ, ಎಂ.ಎಸ್.ಜತ್ತಿ, ರಾವತ ಕಂಬಾರ, ಗೀತಾ ತಾಳಿಕೋಟಿ, ಮುತ್ತು ಲಂಗೂಟಿ, ಲೇಪೂ ಕೊಣ್ಣೂರ, ಶ್ರೀಕಾಂತ ಪರನಾಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>