<p><strong>ಹುಬ್ಬಳ್ಳಿ</strong>: ಎಲ್ಲ ಕಾಯಿಲೆಗಳಂತೆ ಕ್ಯಾನ್ಸರ್ ಕೂಡ ಒಂದು. ತಂಬಾಕು, ಮದ್ಯಪಾನ ಹಾಗೂ ಇಂದಿನ ಆಹಾರ ಪದ್ಧತಿ ಕ್ಯಾನ್ಸರ್ ಬರಲು ಮುಖ್ಯ ಕಾರಣಗಳಾಗಿವೆ ಎಂದು ನವನಗರದ ಕ್ಯಾನ್ಸರ್ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಂಜುಳಾ ಹುಗ್ಗಿ ಹೇಳಿದರು.</p>.<p>ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನರಲ್ಲಿ ಕ್ಯಾನ್ಸರ್ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ಅವುಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಹೋಗಲಾಡಿಸಬೇಕು ಎಂದರು.</p>.<p>ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ್ ಹಳ್ಳಿಕೇರಿ ಮಾತನಾಡಿ, ತಂಬಾಕು ಜೀವನವನ್ನು ಕೊಲ್ಲುತ್ತದೆ. ಅದು ನಮ್ಮನ್ನೆಲ್ಲ ಕೊಲ್ಲುವ ಮೊದಲೇ ನಾವೆಲ್ಲರೂ ಕೂಡಿ ತಂಬಾಕನ್ನು ಸುಡಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಡಾ.ಎನ್. ಡಿ. ಶೇಖ್ ಮಾತನಾಡಿ, ಇಂದಿನ ಮಕ್ಕಳು ತಂದೆ-ತಾಯಿಗಳಿಗಿಂತ ಶಿಕ್ಷಕರ ಮಾತುಗಳಿಗೆ ಹೆಚ್ಚು ಬೆಲೆ ಕೊಡುವ ಕಾರಣ ಶಿಕ್ಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ಡಾ.ಜಿ.ಎಂ. ಸುಣಗಾರ, ಪ್ರಾಧ್ಯಾಪಕರಾದ ಡಾ.ಆರ್.ಎಸ್. ಪಾಟೀಲ, ಡಾ.ಪಿ.ಎಸ್. ಹೆಗಡೆ, ಡಾ.ಎ.ಜೆ. ಪಾಟೀಲ, ಡಾ.ಜೆ.ಸಿ. ಹಿರೇಮಠ, ಡಾ.ಎಂ.ಪಿ. ಚಳಗೇರಿ, ಡಾ.ಎಚ್.ಆರ್. ಕುರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಎಲ್ಲ ಕಾಯಿಲೆಗಳಂತೆ ಕ್ಯಾನ್ಸರ್ ಕೂಡ ಒಂದು. ತಂಬಾಕು, ಮದ್ಯಪಾನ ಹಾಗೂ ಇಂದಿನ ಆಹಾರ ಪದ್ಧತಿ ಕ್ಯಾನ್ಸರ್ ಬರಲು ಮುಖ್ಯ ಕಾರಣಗಳಾಗಿವೆ ಎಂದು ನವನಗರದ ಕ್ಯಾನ್ಸರ್ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಂಜುಳಾ ಹುಗ್ಗಿ ಹೇಳಿದರು.</p>.<p>ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನರಲ್ಲಿ ಕ್ಯಾನ್ಸರ್ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ಅವುಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಹೋಗಲಾಡಿಸಬೇಕು ಎಂದರು.</p>.<p>ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ್ ಹಳ್ಳಿಕೇರಿ ಮಾತನಾಡಿ, ತಂಬಾಕು ಜೀವನವನ್ನು ಕೊಲ್ಲುತ್ತದೆ. ಅದು ನಮ್ಮನ್ನೆಲ್ಲ ಕೊಲ್ಲುವ ಮೊದಲೇ ನಾವೆಲ್ಲರೂ ಕೂಡಿ ತಂಬಾಕನ್ನು ಸುಡಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಡಾ.ಎನ್. ಡಿ. ಶೇಖ್ ಮಾತನಾಡಿ, ಇಂದಿನ ಮಕ್ಕಳು ತಂದೆ-ತಾಯಿಗಳಿಗಿಂತ ಶಿಕ್ಷಕರ ಮಾತುಗಳಿಗೆ ಹೆಚ್ಚು ಬೆಲೆ ಕೊಡುವ ಕಾರಣ ಶಿಕ್ಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ಡಾ.ಜಿ.ಎಂ. ಸುಣಗಾರ, ಪ್ರಾಧ್ಯಾಪಕರಾದ ಡಾ.ಆರ್.ಎಸ್. ಪಾಟೀಲ, ಡಾ.ಪಿ.ಎಸ್. ಹೆಗಡೆ, ಡಾ.ಎ.ಜೆ. ಪಾಟೀಲ, ಡಾ.ಜೆ.ಸಿ. ಹಿರೇಮಠ, ಡಾ.ಎಂ.ಪಿ. ಚಳಗೇರಿ, ಡಾ.ಎಚ್.ಆರ್. ಕುರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>