<p><strong>ಹುಬ್ಬಳ್ಳಿ</strong>: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿ ಕಲೆ ಹಾಕುತ್ತಿದ್ದು ಸಮಾಜದಲ್ಲಿ ಒಡಕು ಮೂಡಿಸುವ ಉದ್ದೇಶ ಹೊಂದಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ಯತೀತತೆ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಆದರೆ, ಈ ಸಮೀಕ್ಷೆ ಮೂಲಕ ಜಾತಿಪದ್ಧತಿ ಹೆಚ್ಚಿಸಿ ಸಮಾಜವನ್ನು ಒಡೆದ ಅಪಕೀರ್ತಿಗೆ ಅವರು ಒಳಗಾಗಬೇಕಾಗುತ್ತದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜನಗಣತಿ ಮಾಡಲಿದೆ. ರಾಜಕೀಯ ಲಾಭಕ್ಕಾಗಿ ಈಗ ರಾಜ್ಯದ ಸಮೀಕ್ಷೆ ತರಾತುರಿಯಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರು ಧರ್ಮವನ್ನು ನೋಡಿ ಮೀಸಲಾತಿ ಕೊಡುತ್ತಾರಾ’ ಎಂದು ಅವರು ಪ್ರಶ್ನಿಸಿದರು. </p>.<p>‘ವೀರಶೈವ–ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್ 2013ರಿಂದಲೇ ನಡೆಸಿದೆ. 2018ರಲ್ಲಿ ಜನರು ಅದಕ್ಕೆ ತಕ್ಕ ಉತ್ತರ ಕೊಟ್ಟಿದ್ದರು. ಈಗ ಮತ್ತೆ ಅಂತಹ ದುಸ್ಸಾಹಸಕ್ಕೆ ಕೈಹಾಕಿದ್ದು, ಜನ ಪಾಠ ಕಲಿಸುವರು’ ಎಂದರು.</p>.<p>‘ಹಿಂದುಳಿದ ವರ್ಗಗಳಿಗೆ ಬಿಡುಗಡೆಯಾಗಿದ್ದ ₹340 ಕೋಟಿ ಅನುದಾನ ಹಿಂಪಡೆದು, ಸಮೀಕ್ಷೆಗೆ ಬಳಸುವುದಾಗಿ ಸರ್ಕಾರ ಹೇಳಿದೆ. ದಲಿತ, ಹಿಂದುಳಿದವರ ಮತಗಳನ್ನು ಪಡೆದು ಅವರಿಗೆ ವಂಚಿಸಲಾಗುತ್ತಿದೆ. ನಿಜವಾದ ದಲಿತ ವಿರೋಧಿ ಕಾಂಗ್ರೆಸ್’ ಎಂದು ದೂರಿದರು. </p>.<p>ಅಧಿಕಾರ ಹೋಗಲಿದೆ ಎಂಬ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನ ಭದ್ರಪಡಿಸಿಕೊಳ್ಳಲು ಸಮೀಕ್ಷೆ ಕಸರತ್ತು ನಡೆಸಿದ್ದಾರೆ. ಅವರು ಒಂದು ವರ್ಷದಿಂದ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ ಅರವಿಂದ ಬೆಲ್ಲದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿ ಕಲೆ ಹಾಕುತ್ತಿದ್ದು ಸಮಾಜದಲ್ಲಿ ಒಡಕು ಮೂಡಿಸುವ ಉದ್ದೇಶ ಹೊಂದಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ಯತೀತತೆ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಆದರೆ, ಈ ಸಮೀಕ್ಷೆ ಮೂಲಕ ಜಾತಿಪದ್ಧತಿ ಹೆಚ್ಚಿಸಿ ಸಮಾಜವನ್ನು ಒಡೆದ ಅಪಕೀರ್ತಿಗೆ ಅವರು ಒಳಗಾಗಬೇಕಾಗುತ್ತದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜನಗಣತಿ ಮಾಡಲಿದೆ. ರಾಜಕೀಯ ಲಾಭಕ್ಕಾಗಿ ಈಗ ರಾಜ್ಯದ ಸಮೀಕ್ಷೆ ತರಾತುರಿಯಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರು ಧರ್ಮವನ್ನು ನೋಡಿ ಮೀಸಲಾತಿ ಕೊಡುತ್ತಾರಾ’ ಎಂದು ಅವರು ಪ್ರಶ್ನಿಸಿದರು. </p>.<p>‘ವೀರಶೈವ–ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್ 2013ರಿಂದಲೇ ನಡೆಸಿದೆ. 2018ರಲ್ಲಿ ಜನರು ಅದಕ್ಕೆ ತಕ್ಕ ಉತ್ತರ ಕೊಟ್ಟಿದ್ದರು. ಈಗ ಮತ್ತೆ ಅಂತಹ ದುಸ್ಸಾಹಸಕ್ಕೆ ಕೈಹಾಕಿದ್ದು, ಜನ ಪಾಠ ಕಲಿಸುವರು’ ಎಂದರು.</p>.<p>‘ಹಿಂದುಳಿದ ವರ್ಗಗಳಿಗೆ ಬಿಡುಗಡೆಯಾಗಿದ್ದ ₹340 ಕೋಟಿ ಅನುದಾನ ಹಿಂಪಡೆದು, ಸಮೀಕ್ಷೆಗೆ ಬಳಸುವುದಾಗಿ ಸರ್ಕಾರ ಹೇಳಿದೆ. ದಲಿತ, ಹಿಂದುಳಿದವರ ಮತಗಳನ್ನು ಪಡೆದು ಅವರಿಗೆ ವಂಚಿಸಲಾಗುತ್ತಿದೆ. ನಿಜವಾದ ದಲಿತ ವಿರೋಧಿ ಕಾಂಗ್ರೆಸ್’ ಎಂದು ದೂರಿದರು. </p>.<p>ಅಧಿಕಾರ ಹೋಗಲಿದೆ ಎಂಬ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನ ಭದ್ರಪಡಿಸಿಕೊಳ್ಳಲು ಸಮೀಕ್ಷೆ ಕಸರತ್ತು ನಡೆಸಿದ್ದಾರೆ. ಅವರು ಒಂದು ವರ್ಷದಿಂದ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ ಅರವಿಂದ ಬೆಲ್ಲದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>