<p><strong>ಹುಬ್ಬಳ್ಳಿ</strong>: ‘ತರಾತುರಿಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಸರ್ಕಾರ ಏನು ಸಾಧಿಸಲು ಹೊರಟಿದೆ?’ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರಶ್ನಿಸಿದರು.</p>.<p>‘ಮೊದಲು ಜಾತಿಪಟ್ಟಿಯಲ್ಲಿ ಆದ ಗೊಂದಲ ನಿವಾರಿಸಬೇಕು. ಜನರಿಂದ ಆಕ್ಷೇಪಣೆ ಆಹ್ವಾನಿಸಿ, ಹತ್ತು ದಿನ ಕಾಲಾವಕಾಶ ನೀಡಬೇಕು. ಆ ನಂತರ ಕಾನೂನು ತಜ್ಞರ ಸಮಿತಿ ರಚಿಸಿ, ಸಮಾಜದ ಹಿರಿಯರ ಜತೆ ಚರ್ಚಿಸಿ ಜಾತಿ ಸಮೀಕ್ಷೆ ನಡೆಸಬೇಕು. ಇದು ಏಳು ಕೋಟಿ ಕನ್ನಡಿಗರ ಭವಿಷ್ಯದ ಪ್ರಶ್ನೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹುಬ್ಬಳ್ಳಿಯ ಏಕತಾ ಸಮಾವೇಶಕ್ಕೂ, ಪಂಚಮಸಾಲಿ ಸಮಾಜಕ್ಕೂ ಸಂಬಂಧ ಇಲ್ಲ. ಅದು ಸಣ್ಣ ಸಮಾಜದವರ ಸಮಾವೇಶ. ಕೆಲ ಸ್ವಾಮೀಜಿಗಳು ಭಾಗವಹಿಸಿದ್ದರು. ಪುರೋಹಿತರಿಗೆ ಕಾವಿ ಬಟ್ಟೆ ಹಾಕಿ, ಕೂರಿಸಲಾಗಿತ್ತು’ ಎಂದರು.</p>.<p>‘ಶಾಸಕ ವಿಜಯಾನಂದ ಕಾಶಪ್ಪನವರ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ನಮ್ಮ ಸಮಾಜದವರು ಪಂಚಮಸಾಲಿ ಪೀಠಗಳು ಹೇಳುವುದನ್ನು ಮಾತ್ರ ಕೇಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ತರಾತುರಿಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಸರ್ಕಾರ ಏನು ಸಾಧಿಸಲು ಹೊರಟಿದೆ?’ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರಶ್ನಿಸಿದರು.</p>.<p>‘ಮೊದಲು ಜಾತಿಪಟ್ಟಿಯಲ್ಲಿ ಆದ ಗೊಂದಲ ನಿವಾರಿಸಬೇಕು. ಜನರಿಂದ ಆಕ್ಷೇಪಣೆ ಆಹ್ವಾನಿಸಿ, ಹತ್ತು ದಿನ ಕಾಲಾವಕಾಶ ನೀಡಬೇಕು. ಆ ನಂತರ ಕಾನೂನು ತಜ್ಞರ ಸಮಿತಿ ರಚಿಸಿ, ಸಮಾಜದ ಹಿರಿಯರ ಜತೆ ಚರ್ಚಿಸಿ ಜಾತಿ ಸಮೀಕ್ಷೆ ನಡೆಸಬೇಕು. ಇದು ಏಳು ಕೋಟಿ ಕನ್ನಡಿಗರ ಭವಿಷ್ಯದ ಪ್ರಶ್ನೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹುಬ್ಬಳ್ಳಿಯ ಏಕತಾ ಸಮಾವೇಶಕ್ಕೂ, ಪಂಚಮಸಾಲಿ ಸಮಾಜಕ್ಕೂ ಸಂಬಂಧ ಇಲ್ಲ. ಅದು ಸಣ್ಣ ಸಮಾಜದವರ ಸಮಾವೇಶ. ಕೆಲ ಸ್ವಾಮೀಜಿಗಳು ಭಾಗವಹಿಸಿದ್ದರು. ಪುರೋಹಿತರಿಗೆ ಕಾವಿ ಬಟ್ಟೆ ಹಾಕಿ, ಕೂರಿಸಲಾಗಿತ್ತು’ ಎಂದರು.</p>.<p>‘ಶಾಸಕ ವಿಜಯಾನಂದ ಕಾಶಪ್ಪನವರ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ನಮ್ಮ ಸಮಾಜದವರು ಪಂಚಮಸಾಲಿ ಪೀಠಗಳು ಹೇಳುವುದನ್ನು ಮಾತ್ರ ಕೇಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>