<p><strong>ಹುಬ್ಬಳ್ಳಿ</strong>: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡಿ ಸರ್ಕಾರ ಏನು ಸಾಧಿಸಲು ಹೊರಟಿದೆ. ಅವೈಜ್ಞಾನಿಕ ಎಂಬ ಕಾರಣಕ್ಕಾಗಿಯೇ ಕಾಂತರಾಜು ಅಯೋಗದ ವರದಿಯನ್ನು ತಿರಸ್ಕರಿಸಲಾಗಿದೆ. ಹೀಗಾಗಿ ಈಗ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನನಂದ ಸ್ವಾಮೀಜಿ ಒತ್ತಾಯಿಸಿದರು.</p>.ಜಾತಿಗಣತಿ ವೇಳೆ ಧರ್ಮ ಒಡೆಯುವ ಕೆಲಸ: ಶಾಸಕ ಚನ್ನಬಸಪ್ಪ ಆರೋಪ.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, ಸಾರ್ವಜನಿಕರ ಆಕ್ಷೇಪಣೆ ಆಹ್ವಾನಿಸಬೇಕು. ಆ ನಂತರ ಕಾನೂನು ತಜ್ಞರ ಸಮಿತಿ ರಚಿಸಿ, ಸಮಾಜದ ಹಿರಿಯರ ಜತೆ ಚರ್ಚಿಸಿ ಸಮೀಕ್ಷೆ ನಡೆಸಬೇಕು.ಇದು ಏಳು ಕೋಟಿ ಕನ್ನಡಿಗರ ಭವಿಷ್ಯದ ಪ್ರಶ್ನೆ. ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.</p><p>ಹಿಂದುಳಿದ ವರ್ಗಗಳ ಆಯೋಗವು ಜಾತಿ ಪಟ್ಟಿಯಲ್ಲಿ ಸಾಕಷ್ಟು ಗೊಂದಲ ಮೂಡಿಸಿದೆ. ಲಿಂಗಾಯತ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಎಂಬ ದೋಷಗಳನ್ನು ಉಳಿಸಿದೆ. ಒಳಪಂಗಡಗಳಲ್ಲಿ, ಲಿಂಗಾಯತ ಅಗಸಕ್ಕೆ ಒಂದು ಕೋಡ್ , ಅಗಸ ಲಿಂಗಾಯಕ್ಕೆ ಇನ್ನೊಂದು ಕೋಡ್ ನೀಡಲಾಗಿದೆ. ಅಗಸ ಕ್ರಿಶ್ಚಿಯನ್ ಎಂದು ಬರೆಸಿದವರನ್ನು ಯಾವ ಧರ್ಮದವರೆಂದು ಪರಿಗಣಿಸಲಾಗುತ್ತದೆ ಎಂದು ಪ್ರಶ್ನಿಸಿದರು.</p>.ಜಾತಿಗಣತಿ ಸಮೀಕ್ಷೆಯಲ್ಲಿ ರೆಡ್ಡಿ ಎಂದು ನಮೂದಿಸಿ: ವೇಮನಾನಂದ ಸ್ವಾಮೀಜಿ .<p>ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಏಕತಾ ಸಮಾವೇಶಕ್ಕೂ, ಪಂಚಮಸಾಲಿ ಸಮಾಜಕ್ಕೂ ಸಂಬಂಧ ಇಲ್ಲ. ಶಾಸಕ ವಿಜಯಾನಂದ ಕಾಶನವರ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪಂಚಮಸಾಲಿ ಪೀಠಗಳು ಹೇಳುವುದನ್ನು ಮಾತ್ರ ಸಮಾಜದವರು ಕೇಳಬೇಕು ಎಂದರು.</p><p>ಅದು ಸಣ್ಣ ಸಮುದಾಯದವರ ಸಮಾವೇಶ. ಅಲ್ಲಿ ಕೇವಲ ಏಳು ಸಾವಿರ ಜನ ಮತ್ತು ಕೆಲವೇ ಸ್ವಾಮೀಜಿಗಳು ಭಾಗವಹಿಸಿದ್ದರು. ಉಳಿದಂತೆ ಪುರೋಹಿತರಿಗೆ ಕಾವಿ ಬಟ್ಟೆ ಹಾಕಿ ಕೂರಿಸಿದ್ದರು. ಸಮಾವೇಶದಲ್ಲಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಅವರು ಗೊಂದಲದಲ್ಲಿದ್ದಾರೆ. ನಮ್ಮಲ್ಲಿ ಸ್ಪಷ್ಟತೆ ಇದೆ ಎಂದು ಹೇಳಿದರು.</p>.ಈ ಹಿಂದೆಯೇ ಜಾತಿ ಗಣತಿ ಮಾಡದಿರುವುದು ನನ್ನ ತಪ್ಪು: ರಾಹುಲ್ ಗಾಂಧಿ ವಿಷಾದ.<p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸುವಂತೆ ಪಂಚಮಸಾಲಿ ಪೀಠ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ನಿರ್ಣಯ ಕೈಗೊಂಡಿದೆ. 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಸಮಾಜದವರ ಅಭಿಪ್ರಾಯ ಆಲಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಠದಲ್ಲಿ ಕುಳಿತು ನಿರ್ಧಾರ ಮಾಡಿಲ್ಲ. ಈ ಬಗ್ಗೆ ಸಮುದಾಯದವರ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.</p><p>ಆಯಾ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಮುದಾಯದ ಪ್ರಮುಖರು ಜಾಗೃತಿ ಮೂಡಿಸಲಿದ್ದಾರೆ. ಮತ್ತೆ 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ನಮ್ಮಸಮಾಜದ ಮೂರು ಪೀಠಗಳು ಒಮ್ಮತದ ನಿರ್ಣಯ ಕೈಗೊಂಡಿದ್ದೇವೆ. ಎಲ್ಲ ಮುಖಂಡರು ಅದನ್ನು ಒಪ್ಪುವುದಾಗಿ ಹೇಳಿದ್ದಾರೆ ಎಂದು ಹೇಳಿದರು.</p> .ಒಬಿಸಿ ಸಮಸ್ಯೆ ಅರಿತಿದ್ದರೆ ಮೊದಲೇ ಜಾತಿಗಣತಿ: ರಾಹುಲ್ ಗಾಂಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡಿ ಸರ್ಕಾರ ಏನು ಸಾಧಿಸಲು ಹೊರಟಿದೆ. ಅವೈಜ್ಞಾನಿಕ ಎಂಬ ಕಾರಣಕ್ಕಾಗಿಯೇ ಕಾಂತರಾಜು ಅಯೋಗದ ವರದಿಯನ್ನು ತಿರಸ್ಕರಿಸಲಾಗಿದೆ. ಹೀಗಾಗಿ ಈಗ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನನಂದ ಸ್ವಾಮೀಜಿ ಒತ್ತಾಯಿಸಿದರು.</p>.ಜಾತಿಗಣತಿ ವೇಳೆ ಧರ್ಮ ಒಡೆಯುವ ಕೆಲಸ: ಶಾಸಕ ಚನ್ನಬಸಪ್ಪ ಆರೋಪ.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, ಸಾರ್ವಜನಿಕರ ಆಕ್ಷೇಪಣೆ ಆಹ್ವಾನಿಸಬೇಕು. ಆ ನಂತರ ಕಾನೂನು ತಜ್ಞರ ಸಮಿತಿ ರಚಿಸಿ, ಸಮಾಜದ ಹಿರಿಯರ ಜತೆ ಚರ್ಚಿಸಿ ಸಮೀಕ್ಷೆ ನಡೆಸಬೇಕು.ಇದು ಏಳು ಕೋಟಿ ಕನ್ನಡಿಗರ ಭವಿಷ್ಯದ ಪ್ರಶ್ನೆ. ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.</p><p>ಹಿಂದುಳಿದ ವರ್ಗಗಳ ಆಯೋಗವು ಜಾತಿ ಪಟ್ಟಿಯಲ್ಲಿ ಸಾಕಷ್ಟು ಗೊಂದಲ ಮೂಡಿಸಿದೆ. ಲಿಂಗಾಯತ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಎಂಬ ದೋಷಗಳನ್ನು ಉಳಿಸಿದೆ. ಒಳಪಂಗಡಗಳಲ್ಲಿ, ಲಿಂಗಾಯತ ಅಗಸಕ್ಕೆ ಒಂದು ಕೋಡ್ , ಅಗಸ ಲಿಂಗಾಯಕ್ಕೆ ಇನ್ನೊಂದು ಕೋಡ್ ನೀಡಲಾಗಿದೆ. ಅಗಸ ಕ್ರಿಶ್ಚಿಯನ್ ಎಂದು ಬರೆಸಿದವರನ್ನು ಯಾವ ಧರ್ಮದವರೆಂದು ಪರಿಗಣಿಸಲಾಗುತ್ತದೆ ಎಂದು ಪ್ರಶ್ನಿಸಿದರು.</p>.ಜಾತಿಗಣತಿ ಸಮೀಕ್ಷೆಯಲ್ಲಿ ರೆಡ್ಡಿ ಎಂದು ನಮೂದಿಸಿ: ವೇಮನಾನಂದ ಸ್ವಾಮೀಜಿ .<p>ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಏಕತಾ ಸಮಾವೇಶಕ್ಕೂ, ಪಂಚಮಸಾಲಿ ಸಮಾಜಕ್ಕೂ ಸಂಬಂಧ ಇಲ್ಲ. ಶಾಸಕ ವಿಜಯಾನಂದ ಕಾಶನವರ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪಂಚಮಸಾಲಿ ಪೀಠಗಳು ಹೇಳುವುದನ್ನು ಮಾತ್ರ ಸಮಾಜದವರು ಕೇಳಬೇಕು ಎಂದರು.</p><p>ಅದು ಸಣ್ಣ ಸಮುದಾಯದವರ ಸಮಾವೇಶ. ಅಲ್ಲಿ ಕೇವಲ ಏಳು ಸಾವಿರ ಜನ ಮತ್ತು ಕೆಲವೇ ಸ್ವಾಮೀಜಿಗಳು ಭಾಗವಹಿಸಿದ್ದರು. ಉಳಿದಂತೆ ಪುರೋಹಿತರಿಗೆ ಕಾವಿ ಬಟ್ಟೆ ಹಾಕಿ ಕೂರಿಸಿದ್ದರು. ಸಮಾವೇಶದಲ್ಲಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಅವರು ಗೊಂದಲದಲ್ಲಿದ್ದಾರೆ. ನಮ್ಮಲ್ಲಿ ಸ್ಪಷ್ಟತೆ ಇದೆ ಎಂದು ಹೇಳಿದರು.</p>.ಈ ಹಿಂದೆಯೇ ಜಾತಿ ಗಣತಿ ಮಾಡದಿರುವುದು ನನ್ನ ತಪ್ಪು: ರಾಹುಲ್ ಗಾಂಧಿ ವಿಷಾದ.<p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸುವಂತೆ ಪಂಚಮಸಾಲಿ ಪೀಠ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ನಿರ್ಣಯ ಕೈಗೊಂಡಿದೆ. 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಸಮಾಜದವರ ಅಭಿಪ್ರಾಯ ಆಲಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಠದಲ್ಲಿ ಕುಳಿತು ನಿರ್ಧಾರ ಮಾಡಿಲ್ಲ. ಈ ಬಗ್ಗೆ ಸಮುದಾಯದವರ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.</p><p>ಆಯಾ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಮುದಾಯದ ಪ್ರಮುಖರು ಜಾಗೃತಿ ಮೂಡಿಸಲಿದ್ದಾರೆ. ಮತ್ತೆ 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ನಮ್ಮಸಮಾಜದ ಮೂರು ಪೀಠಗಳು ಒಮ್ಮತದ ನಿರ್ಣಯ ಕೈಗೊಂಡಿದ್ದೇವೆ. ಎಲ್ಲ ಮುಖಂಡರು ಅದನ್ನು ಒಪ್ಪುವುದಾಗಿ ಹೇಳಿದ್ದಾರೆ ಎಂದು ಹೇಳಿದರು.</p> .ಒಬಿಸಿ ಸಮಸ್ಯೆ ಅರಿತಿದ್ದರೆ ಮೊದಲೇ ಜಾತಿಗಣತಿ: ರಾಹುಲ್ ಗಾಂಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>