ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಉದ್ಯಮಿ ರಮೇಶ ಬೋನಗೇರಿ ಮನೆ ಮೇಲೆ ಸಿಸಿಬಿ ದಾಳಿ: ₹3 ಕೋಟಿ ನಗದು ವಶ

ಪ್ರಕರಣ ದಾಖಲು
Last Updated 4 ಮಾರ್ಚ್ 2023, 11:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಉದ್ಯಮಿಯೊಬ್ಬರ ಮನೆಯಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ₹3 ಕೋಟಿ ನಗದನ್ನು ಸಿಸಿಬಿ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಸಿಸಿಬಿ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದ ತಂಡ ಭವಾನಿನಗರದ ಉದ್ಯಮಿ ರಮೇಶ ಬೋನಗೇರಿ ಅವರ ಮನೆ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಿಸಿಟ್ಟಿದ್ದ ಹಣವನ್ನು ಪತ್ತೆ ಹಚ್ಚಿದೆ. ₹500 ಮುಖ ಬೆಲೆಯ ₹3 ಕೋಟಿ ನಗದು ಪತ್ತೆ ಹಚ್ಚಿರುವ ತಂಡ, ಅದಕ್ಕೆ ಸಂಬಂಧಿಸಿದ ಕಾಗದ ಪತ್ರಗಳನ್ನು ನೀಡುವಂತೆ ಮನೆ ಮಾಲೀಕರಲ್ಲಿ ವಿನಂತಿಸಿದೆ. ಸರಿಯಾದ ಮಾಹಿತಿ ನೀಡದ ಕಾರಣ ಹಣವನ್ನು ವಶಪಡಿಸಿಕೊಂಡು ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

‘ಹಣದ ಮೂಲ ಮತ್ತು ಅಷ್ಟೊಂದು ಹಣ ಸಂಗ್ರಹಿಸಿಡಲಾಗಿದ್ದ ಉದ್ದೇಶಗಳನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ. ಹೆಚ್ಚಿನ ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇನ್‌ಸ್ಪೆಕ್ಟರ್‌ ಎಸ್‌.ಕೆ. ಪಟ್ಟಣಕುಡೆ ತನಿಖೆ ಮುಂದುವರಿಸಿದ್ದಾರೆ’ ಎಂದು ಕಮಿಷನರ್‌ ರಮನ್‌ ಗುಪ್ತಾ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಆರ್ಥಿಕ ಅಪರಾಧಗಳ ವಿಶೇಷ ತನಿಖಾ ತಂಡದ ಎಎಸ್‌ಐ ಬಿ.ಎನ್‌. ಲಂಗೋಟಿ, ಸಿಬ್ಬಮದಿಯಾದ ಬಸವರಾಜ ಬೆಳಗಾವಿ, ಎಫ್‌.ಬಿ. ಕುರಿ, ರಾಜೀವ್‌ ಬಿಷ್ಟಂಡೇರ್‌, ಸಂತೋಷ ಇಚ್ಚಂಗಿ, ವಿದ್ಯಾ ದಳವಾಯಿ ಪಾಲ್ಗೊಂಡಿದ್ದರು. ಸಿಬ್ಬಂದಿಯ ಕಾರ್ಯಕ್ಕೆ ಕಮಿಷನರ್‌ ಗುಪ್ತಾ ಅವರು ₹ 25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT