ಸರ್ಕಾರದಿಂದ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಪೂರೈಸುವ ಪಡಿತರ ಅಕ್ಕಿಯನ್ನು ಆರೋಪಿ ಷಣ್ಮುಖಪ್ಪ ಬೆಟಗೇರಿ ಎಂಬಾತ ₹10ರಿಂದ ₹15 ಕೊಟ್ಟು ಖರೀದಿಸುತ್ತಿದ್ದ. ಬಳಿಕ, ಮಂಜುನಾಥ ಹರ್ಲಾಪುರ ಎಂಬುವವರಿಗೆ ಮಾರಾಟ ಮಾಡುತ್ತಿದ್ದ. ಈತ ₹35ರಿಂದ ₹40 ಬೆಲೆಗೆ ಮಾಹಾರಾಷ್ಟ್ರದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯ ತಂಡದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ರಮೇಶ ಕಾಂಬಳೆ, ಗೋಪಾಲ ರಾಠೋಡ, ಎಸ್.ಎಚ್. ಸಾಳುಂಕೆ, ಬಿ.ಎನ್. ಲಂಗೋಟಿ, ಎನ್.ಓ. ಜಾಧವ, ಎಸ್.ಸಿ. ಜಾಲವಾಡಗಿ, ಉಮೇಶ ದೊಡ್ಡಮನಿ, ಬಿ.ಎಫ್. ಬೆಳಗಾವಿ, ಮಾರುತಿ ಭಜಂತ್ರಿ, ರಾಜೀವ ಬಿಷ್ಟಂಡೇರ, ಎಫ್.ಬಿ. ಕುರಿ, ಅನೀಲ ಹುಗ್ಗಿ, ಡಿ.ಎನ್.ಗುಂಡಗೈ, ಎಸ್.ಎಚ್. ಕೆಂಪಡಿ ಹಾಗೂ ಆರ್.ಎಸ್. ಗುಂಜಳ ಇದ್ದರು.