ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ. ವಿಚಾರ; ಮುಖ್ಯಮಂತ್ರಿಯನ್ನು ಹೆದರಿಸುವ ತಂತ್ರ: ಪ್ರಲ್ಹಾದ ಜೋಶಿ

Last Updated 15 ಜನವರಿ 2021, 9:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯಾವ ಸಿ.ಡಿ. ಇಲ್ಲದಿದ್ದರೂ ಇದನ್ನೇ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಹೆದರಿಸುವ ತಂತ್ರವನ್ನು ಪಕ್ಷದ ಅತೃಪ್ತ ಶಾಸಕರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿ.ಡಿ. ಎಂಬುದು ಇಲ್ಲವೇ ಇಲ್ಲ. ಇರುವುದು ನಿಜವೇ ಆದರೆ ಅದನ್ನು ಇಟ್ಟುಕೊಂಡು ಬೆದರಿಸುವ ತಂತ್ರ ಯಾಕೆ ಮಾಡಬೇಕು? ಇದ್ದರೆ ಬಿಡುಗಡೆ ಮಾಡಲಿ ಎಂದು ಸ್ವತಃ ಮುಖ್ಯಮಂತ್ರಿಯವರೇ ಬಹಿರಂಗವಾಗಿ ಹೇಳಿದ್ದಾರಲ್ಲವೇ’ ಎಂದು ಪ್ರಶ್ನಿಸಿದರು.

ಸಚಿವ ಸ್ಥಾನ ಸಿಗದ ಕಾರಣಕ್ಕೆ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರಲ್ಲ ಎನ್ನುವ ಪ್ರಶ್ನೆಗೆ ‘ರಾಜಕಾರಣಿಗಳಿಗೆ ಮಹದಾಸೆ ಇರುವುದು ಸಹಜ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕು. ಬಹಿರಂಗ ಹೇಳಿಕೆ ಕೊಡಬಾರದು. ಈಗಿನ ಎಲ್ಲ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರು ಸಮರ್ಥವಾಗಿ ಎದುರಿಸುತ್ತಾರೆ. ಅಷ್ಟೊಂದು ರಾಜಕೀಯ ಅನುಭವ ಅವರಿಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT