ಸಚಿವ ಸ್ಥಾನ ಸಿಗದ ಕಾರಣಕ್ಕೆ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರಲ್ಲ ಎನ್ನುವ ಪ್ರಶ್ನೆಗೆ ‘ರಾಜಕಾರಣಿಗಳಿಗೆ ಮಹದಾಸೆ ಇರುವುದು ಸಹಜ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕು. ಬಹಿರಂಗ ಹೇಳಿಕೆ ಕೊಡಬಾರದು. ಈಗಿನ ಎಲ್ಲ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರು ಸಮರ್ಥವಾಗಿ ಎದುರಿಸುತ್ತಾರೆ. ಅಷ್ಟೊಂದು ರಾಜಕೀಯ ಅನುಭವ ಅವರಿಗಿದೆ’ ಎಂದರು.