<p><strong>ಹುಬ್ಬಳ್ಳಿ: </strong>‘ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆದೇಶದಲ್ಲಿ 36 ರಾಜ್ಯಗಳಿವೆ. ಪ್ರತಿ ವರ್ಷ 12 ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ’ ಎಂದರು.</p>.<p>‘ಆದರೂ, ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ. 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ, ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ನಾರಾಯಣ ಗುರು ಹಾಗೂ ಶಂಕರಾಚಾರ್ಯ ಇಬ್ಬರೂ ಸಮಾಜ ಸುಧಾರಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ. ನಾರಾಯಣ ಗುರು ಅವರ ಪ್ರತಿಮೆ ಒಡೆದು ಹಾಕಿದ್ದ ಕಮ್ಯುನಿಸ್ಟ್ ಸರ್ಕಾರವೇ ಈ ವಿಷಯದಲ್ಲಿ ರಾಜಕಾರಣ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ಬೆಳವಣಿಗೆ ಕುರಿತು ತಪ್ಪು ಹೇಳಿಕೆ ನೀಡುವುದಕ್ಕೂ ಮುಂಚೆ, ಸತ್ಯಾಸತ್ಯತೆ ಅರಿಯಬೇಕು’ ಎಂದರು.</p>.<p>‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಐದೂ ವರ್ಷ ರಾಜ್ಯದ ಸ್ತಬ್ಧಚಿತ್ರಗಳು ಗಣ ರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಿರಲಿಲ್ಲವೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ವಿಶೇಷ ಸಂದರ್ಭದಲ್ಲಿ ಮಾತ್ರ ಆ ರೀತಿ ಅವಕಾಶ ನೀಡಲಾಗುತ್ತದೆ’ ಎಂದು ಜಾರಿಕೊಂಡರು.</p>.<p>‘ಪಂಚ ರಾಜ್ಯಗಳ ಪೈಕಿ, ನಾಲ್ಕರಲ್ಲಿ ಬಿಜೆಪಿ ಸರ್ಕಾರವಿತ್ತು. ಚುನಾವಣೆ ಬಳಿಕವೂ ಉತ್ತರಪ್ರದೇಶ ಸೇರಿದಂತೆ ನಾಲ್ಕೂ ಕಡೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ. ಪಂಜಾಬ್ನಲ್ಲಿ ಸವಾಲು ಇದ್ದು, ಪಕ್ಷ ಅದನ್ನು ಸಮರ್ಥವಾಗಿ ಎದುರಿಸಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Briefhead"><strong>‘ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ’</strong></p>.<p>‘ಹೆಚ್ಚುತ್ತಿರುವ ಕೋವಿಡ್–19 ಪ್ರಕರಣಗಳ ನಿಯಂತ್ರಣಕ್ಕೆ ಲಾಕ್ಡೌನ್ ಹಾಗೂ ವಾರಾಂತ್ಯಕರ್ಫ್ಯೂ ಜಾರಿ ಅಗತ್ಯವಿಲ್ಲ. ಹಾಗೆ ಮಾಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಪ್ರಲ್ಹಾದ ಜೋಶಿ ಹೇಳಿದರು.</p>.<p>‘ಸಣ್ಣ ಮೈಕ್ರೊ ಕಂಟೈನ್ಮೆಂಟ್ ವಲಯಗಳ ರಚನೆ ಹಾಗೂ ಸೋಂಕಿತರು ಮತ್ತು ಅವರ ಸಂಪರ್ಕಕ್ಕೆ ಬಂದವರ ಪತ್ತೆಗೆ ವ್ಯವಸ್ಥೆ ಮಾಡಿಕೊಂಡು,ಸೋಂಕು ನಿಯಂತ್ರಿಸುವಂತೆ ರಾಜ್ಯಗಳಿಗೆ ಈಗಾಗಲೇ ಸೂಚಿಸಲಾಗಿದೆ’ ಎಂದರು.</p>.<p>‘ದೇಶದಲ್ಲಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆದಿದೆ. ಸೋಂಕಿತರ ಚಿಕಿತ್ಸೆಗಾಗಿ ವೈದ್ಯಕೀಯ ಆಮ್ಲಜನಕ ಸೇರಿದಂತೆ ಹಲವು ಸೌಲಭ್ಯಗಳನ್ನು ಆಸ್ಪತ್ರೆಗಳಿಗೆ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆದೇಶದಲ್ಲಿ 36 ರಾಜ್ಯಗಳಿವೆ. ಪ್ರತಿ ವರ್ಷ 12 ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ’ ಎಂದರು.</p>.<p>‘ಆದರೂ, ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ. 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ, ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ನಾರಾಯಣ ಗುರು ಹಾಗೂ ಶಂಕರಾಚಾರ್ಯ ಇಬ್ಬರೂ ಸಮಾಜ ಸುಧಾರಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ. ನಾರಾಯಣ ಗುರು ಅವರ ಪ್ರತಿಮೆ ಒಡೆದು ಹಾಕಿದ್ದ ಕಮ್ಯುನಿಸ್ಟ್ ಸರ್ಕಾರವೇ ಈ ವಿಷಯದಲ್ಲಿ ರಾಜಕಾರಣ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ಬೆಳವಣಿಗೆ ಕುರಿತು ತಪ್ಪು ಹೇಳಿಕೆ ನೀಡುವುದಕ್ಕೂ ಮುಂಚೆ, ಸತ್ಯಾಸತ್ಯತೆ ಅರಿಯಬೇಕು’ ಎಂದರು.</p>.<p>‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಐದೂ ವರ್ಷ ರಾಜ್ಯದ ಸ್ತಬ್ಧಚಿತ್ರಗಳು ಗಣ ರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಿರಲಿಲ್ಲವೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ವಿಶೇಷ ಸಂದರ್ಭದಲ್ಲಿ ಮಾತ್ರ ಆ ರೀತಿ ಅವಕಾಶ ನೀಡಲಾಗುತ್ತದೆ’ ಎಂದು ಜಾರಿಕೊಂಡರು.</p>.<p>‘ಪಂಚ ರಾಜ್ಯಗಳ ಪೈಕಿ, ನಾಲ್ಕರಲ್ಲಿ ಬಿಜೆಪಿ ಸರ್ಕಾರವಿತ್ತು. ಚುನಾವಣೆ ಬಳಿಕವೂ ಉತ್ತರಪ್ರದೇಶ ಸೇರಿದಂತೆ ನಾಲ್ಕೂ ಕಡೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ. ಪಂಜಾಬ್ನಲ್ಲಿ ಸವಾಲು ಇದ್ದು, ಪಕ್ಷ ಅದನ್ನು ಸಮರ್ಥವಾಗಿ ಎದುರಿಸಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Briefhead"><strong>‘ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ’</strong></p>.<p>‘ಹೆಚ್ಚುತ್ತಿರುವ ಕೋವಿಡ್–19 ಪ್ರಕರಣಗಳ ನಿಯಂತ್ರಣಕ್ಕೆ ಲಾಕ್ಡೌನ್ ಹಾಗೂ ವಾರಾಂತ್ಯಕರ್ಫ್ಯೂ ಜಾರಿ ಅಗತ್ಯವಿಲ್ಲ. ಹಾಗೆ ಮಾಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಪ್ರಲ್ಹಾದ ಜೋಶಿ ಹೇಳಿದರು.</p>.<p>‘ಸಣ್ಣ ಮೈಕ್ರೊ ಕಂಟೈನ್ಮೆಂಟ್ ವಲಯಗಳ ರಚನೆ ಹಾಗೂ ಸೋಂಕಿತರು ಮತ್ತು ಅವರ ಸಂಪರ್ಕಕ್ಕೆ ಬಂದವರ ಪತ್ತೆಗೆ ವ್ಯವಸ್ಥೆ ಮಾಡಿಕೊಂಡು,ಸೋಂಕು ನಿಯಂತ್ರಿಸುವಂತೆ ರಾಜ್ಯಗಳಿಗೆ ಈಗಾಗಲೇ ಸೂಚಿಸಲಾಗಿದೆ’ ಎಂದರು.</p>.<p>‘ದೇಶದಲ್ಲಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆದಿದೆ. ಸೋಂಕಿತರ ಚಿಕಿತ್ಸೆಗಾಗಿ ವೈದ್ಯಕೀಯ ಆಮ್ಲಜನಕ ಸೇರಿದಂತೆ ಹಲವು ಸೌಲಭ್ಯಗಳನ್ನು ಆಸ್ಪತ್ರೆಗಳಿಗೆ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>