'ವಿಶ್ವದಾದ್ಯಂತ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ, ದೇಶದ ಅರ್ಥವ್ಯವಸ್ಥೆ ಮಾತ್ರ ಸದೃಢವಾಗಿದೆ. ಆತ್ಮ ನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಸೇರಿದಂತೆ ಕೇಂದ್ರದ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳಿಂದ ವಿಶ್ವವೇ ಭಾರತವನ್ನು ತಿರುಗಿ ನೋಡುವಂತಾಗಿದೆ. ದೇಶದ ಯುವಜನತೆ ಹೊಸ ಉದ್ಯಮಗಳನ್ನು ಸ್ಥಾಪಿಸಿ, ಸಾಕಷ್ಟು ಮಂದಿಗೆ ಉದ್ಯೋಗ ನೀಡುವ ಸಾಮರ್ಥ್ಯಕ್ಕೆ ಬೆಳೆದಿದೆ' ಎಂದರು.