‘ಮಲವಂತಿಗೆ ಗ್ರಾಮ ಪಂಚಾಯಿತಿಯ ಎಳನೀರು, ಗುತ್ಯಡ್ಕ, ಬಡಾಮನೆ ಮೊದಲಾದ ಪ್ರದೇಶ ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಇದ್ದು, ಮೂಲಸೌಕರ್ಯದಿಂದ ಅಲ್ಲಿನ ಜನತೆ ವಂಚಿತರಾಗಿದ್ದಾರೆ. ಗ್ರಾಮ ಪಂಚಾಯಿತಿಗೆ ಬರಕಾದರೆ ಕೇವಲ 7 ಕಿ.ಮೀ. ದೂರವಿದೆ. ಆದರೆ ರಸ್ತೆಯ ವ್ಯವಸ್ಥೆ ಇಲ್ಲದೆ 120 ಕಿ.ಮೀ. ಸುತ್ತಿ ಬಳಸಿ ಬರಬೇಕಾಗಿದೆ. ಕಚ್ಚಾ ರಸ್ತೆ ಇದ್ದರೂ ಸರಿಪಡಿಸುವ ಹಾಗಿಲ್ಲ. ಅರಣ್ಯ ಇಲಾಖೆಯಿಂದಾಗಿ ವಿದ್ಯುತ್, ರಸ್ತೆ ಮರೀಚಿಕೆಯಾಗಿದೆ. ದಿಡುಪೆ-ಎಳ ನೀರು-ಸಂಸೆ ಸಂಪರ್ಕ ರಸ್ತೆ ಆದಲ್ಲಿ ಎಲ್ಲರಿಗೂ ಅನುಕೂಲ ಅದೀತು’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಜಯರಾಮ ಅವರು ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದರು.