ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮಿ ವಿವೇಕಾನಂದ ಪ್ರತಿಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಲಾರ್ಪಣೆ

ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಮೋದಿ ಕ್ರಮ: ಜೋಶಿ
Last Updated 12 ಜನವರಿ 2023, 9:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಇನ್ನು ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತವಾಗಿ ಎಲ್ಲ ನಾಯಕರೊಂದಿಗೆ ಇಂದು ವಿವೇಕಾನಂದ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದೇನೆ. ನನ್ನೊಂದಿಗೆ ಮಹೇಶ ತೆಂಗಿನಕಾಯಿ ಸೇರಿದಂತೆ ಇನ್ನಿತರ ನಾಯಕರು ಸಾಥ್ ನೀಡಿದರು. ಸ್ವಾಮಿ ವಿವೇಕಾನಂದರು ಸಾಮಾಜಿಕವಾಗಿ ಎಲ್ಲರಿಗೂ ಪ್ರೇರಣೆ ಕೊಡುವ ಕೆಲಸ ಮಾಡಿದ್ದಾರೆ. ವಿವೇಕಾನಂದರ ಜನ್ಮದಿನ ನಿಮಿತ್ತ ಅವಳಿನಗರದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಚರಣೆ ಮಾಡಲಾಗುತ್ತಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುತ್ತಿರುವುದು ಅವಿಸ್ಮರಣೀಯ ಎಂದರು.

ಬಹುತೇಕ ರಾಜಕೀಯ ಪಕ್ಷಗಳು ಜನರನ್ನು ಕರೆದುಕೊಂಡು ಕಾರ್ಯಕ್ರಮ ಮಾಡುವ ಕೆಲಸ ಹೆಚ್ಚಾಗಿವೆ. ಆದರೆ, ಯುವ ಜನೋತ್ಸವಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಜನರನ್ನು ನಿಯಂತ್ರಣ ಮಾಡೋದೇ ದೊಡ್ಡ ಸಮಸ್ಯೆ ಆಗುತ್ತಿದೆ ಎಂದರು.

ಫೆ. 2ರಿಂದ ಹುಬ್ಬಳ್ಳಿ-ಪುಣೆ ವಿಮಾನ ಯಾನ ಆರಂಭವಾಗಲಿದೆ. ಸದ್ಯ ಎರಡು ದಿನಗಳ ಸೇವೆಯನ್ನು ವಿಸ್ತರಣೆ ಮಾಡುವುದರ ಕುರಿತು, ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT