ಹುಬ್ಬಳ್ಳಿ: ಆಮ್ ಆದ್ಮಿ ಪಕ್ಷದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ವಿಕಾಸ ಸೊಪ್ಪಿನ ಅವರನ್ನು ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜಕೀಯ ಸಲಹೆಗಾರ ರೊಮಿ ಭಾಟಿ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ ಜೈನ್, ಜಿಲ್ಲಾ ಘಟಕದ ನೂತನ ಅಧ್ಯಕ್ಷ ಅನಂತಕುಮಾರ ಬುಗಡಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಬಳಿಕ ಮಾತನಾಡಿದ ರೊಮಿ ಭಾಟಿ ‘ಸೊಪ್ಪಿನ ಅವರು ಗ್ರಾಮೀಣ ಜನರ ಸಮಸ್ಯೆಗಳ ವಿರುದ್ಧ ತಮ್ಮ ಹೋರಾಟ ತೀವ್ರಗತಿಯಲ್ಲಿ ಮುಂದುವರಿಸಿ ಬರುವ ಬೇಸಿಗೆಗಾಲಕ್ಕೂ ಮೊದಲು ಕಳಸಾ ಬಂಡೂರಿ ಯೋಜನೆ ಕಾರ್ಯಾರಂಭಕ್ಕೆ ಪ್ರಯತ್ನಿಸಬೇಕು’ ಎಂದರು.