ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಚರ್ಚೆಯಾಗಲೇಬೇಕಾದ ವಿಷಯ: ಚಂದ್ರಶೇಖರ ಕಂಬಾರ

Last Updated 3 ಜನವರಿ 2019, 10:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡದಲ್ಲಿ ನಡೆಯುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಮಹದಾಯಿ‌ ಚರ್ಚೆಯಾಗಲೇಬೇಕಾದ ವಿಷಯ ಎಂದು ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಕಂಬಾರ ಹೇಳಿದರು.

ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ತೆರಳುವ ಮೊದಲು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ‌ ಮಾತನಾಡಿದ ಅವರು ನಾಡಿನ ನೆಲ, ಜಲ‌ ಮತ್ತು ಭಾಷೆ ರಕ್ಷಣೆಗೆ ಸಾಹಿತ್ಯ ಸಮ್ಮೇಳನ ವೇದಿಕೆಯಾಗಬೇಕು. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದರು.

ನನ್ನ ಆತ್ಮೀಯ ಸ್ನೇಹಿತರು ಹಾಗೂ ಗುರುಗಳನ್ನು ಕಂಡ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ತುಂಬಾ ಸಂತೋಷವಾಗುತ್ತಿದೆ. ಜೊತೆಗೆ ‌ಬೇಸರವೂ ಆಗುತ್ತಿದೆ. ಎಂ.ಎಂ.ಕಲಬುರ್ಗಿ ಹಾಗೂ ಗಿರಡ್ಡಿ ಗೋವಿಂದರಾಜ್ ಅವರಂಥ ಸ್ನೇಹಿತರನ್ನು ಕಳೆದುಕೊಂಡ ಬೇಸರ ಕಾಡುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT