<p><strong>ಧಾರವಾಡ: </strong>‘ನನ್ನ ಹತ್ಯೆಗೂ ಸಂಚು ರೂಪಿಸಲಾಗಿತ್ತು ಎಂಬ ವಿಷಯ ಕೇಳಿ ಅದನ್ನು ನನಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಚಂದ್ರಶೇಖರ ಇಂಡಿ (ಚಂದು ಮಾಮ) ಶಕುನಿ ಪಾತ್ರ ನಿರ್ವಹಿಸಿದ್ದಾರೆ’ ಎಂದು ಯೋಗೀಶಗೌಡ ಗೌಡರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಆರೋಪಿಸಿದರು.</p>.<p>ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ವಿಚಾರಣೆ ಎದುರಿಸಿ ಹೊರಬಂದ ಅವರು ಸುದ್ದಿಗಾರರೊಂದಿ ಮಾತನಾಡಿ, ಬಂಧಿತ ಚಂದ್ರಶೇಖ ಇಂಡಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.</p>.<p>‘ಚಂದ್ರಶೇಖರ ಅವರನ್ನು ನಾವು ಚಂದು ಮಾಮ ಎಂದೇ ಕರೆಯುತ್ತೇವೆ. ವಿನಯ ಕುಲಕರ್ಣಿ ಹಾಗೂ ಚಂದು ಮಾಮ ಅವರೊಂದಿಗೆ ನಾವು ಹಲವು ಬಾರಿ ಕುಳಿತು ಊಟ ಮಾಡಿದ್ದೇವೆ. ಅದೇ ಊಟದಲ್ಲಿ ವಿಷ ಬೆರೆಸಿದ್ದರೂ ಸಂತೋಷವಾಗಿ ತಿನ್ನುತ್ತಿದ್ದೆವು. ಈ ವಿಷಯದಲ್ಲಿ ಚಂದು ಮಾಮಾ ‘ಶಕುನಿ’ ಪಾತ್ರ ನಿರ್ವಹಿಸಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.</p>.<p>‘ಈ ಪ್ರಕರಣದಲ್ಲಿ ಚಂದ್ರಶೇಖರ ಇಂಡಿ ಎಂಬ ವ್ಯಕ್ತಿ ಬಂದು ಎಲ್ಲರ ಬದುಕನ್ನೇ ಹಾಳು ಮಾಡಿದ. ಈ ಬಗ್ಗೆ ದೂರು ನೀಡುವ ಬಗ್ಗೆ ನಮ್ಮ ವಕೀಲರ ಬಳಿ ಮಾತನಾಡುತ್ತೇನೆ. ಕೆಲವರಿಗೆ ಹಲವು ದೌರ್ಬಲ್ಯ ಇರುತ್ತವೆ. ನಾವು ಭಾವನೆಗಳೊಂದಿಗೆ ಬದುಕುವ ದೌರ್ಬಲ್ಯದವರಾಗಿದ್ದೇನೆ. ಕೆಲವರು ಚಾಡಿ ಕೇಳುವ ದೌರ್ಬಲ್ಯ ಹೊಂದಿರುತ್ತಾರೆ. ಈ ಚಾಡಿ ಕೇಳಿದ್ದರಿಂದಲೇ ಹೀಗೆ ಆಗಿರಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>‘ನನ್ನ ಹತ್ಯೆಗೂ ಸಂಚು ರೂಪಿಸಲಾಗಿತ್ತು ಎಂಬ ವಿಷಯ ಕೇಳಿ ಅದನ್ನು ನನಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಚಂದ್ರಶೇಖರ ಇಂಡಿ (ಚಂದು ಮಾಮ) ಶಕುನಿ ಪಾತ್ರ ನಿರ್ವಹಿಸಿದ್ದಾರೆ’ ಎಂದು ಯೋಗೀಶಗೌಡ ಗೌಡರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಆರೋಪಿಸಿದರು.</p>.<p>ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ವಿಚಾರಣೆ ಎದುರಿಸಿ ಹೊರಬಂದ ಅವರು ಸುದ್ದಿಗಾರರೊಂದಿ ಮಾತನಾಡಿ, ಬಂಧಿತ ಚಂದ್ರಶೇಖ ಇಂಡಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.</p>.<p>‘ಚಂದ್ರಶೇಖರ ಅವರನ್ನು ನಾವು ಚಂದು ಮಾಮ ಎಂದೇ ಕರೆಯುತ್ತೇವೆ. ವಿನಯ ಕುಲಕರ್ಣಿ ಹಾಗೂ ಚಂದು ಮಾಮ ಅವರೊಂದಿಗೆ ನಾವು ಹಲವು ಬಾರಿ ಕುಳಿತು ಊಟ ಮಾಡಿದ್ದೇವೆ. ಅದೇ ಊಟದಲ್ಲಿ ವಿಷ ಬೆರೆಸಿದ್ದರೂ ಸಂತೋಷವಾಗಿ ತಿನ್ನುತ್ತಿದ್ದೆವು. ಈ ವಿಷಯದಲ್ಲಿ ಚಂದು ಮಾಮಾ ‘ಶಕುನಿ’ ಪಾತ್ರ ನಿರ್ವಹಿಸಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.</p>.<p>‘ಈ ಪ್ರಕರಣದಲ್ಲಿ ಚಂದ್ರಶೇಖರ ಇಂಡಿ ಎಂಬ ವ್ಯಕ್ತಿ ಬಂದು ಎಲ್ಲರ ಬದುಕನ್ನೇ ಹಾಳು ಮಾಡಿದ. ಈ ಬಗ್ಗೆ ದೂರು ನೀಡುವ ಬಗ್ಗೆ ನಮ್ಮ ವಕೀಲರ ಬಳಿ ಮಾತನಾಡುತ್ತೇನೆ. ಕೆಲವರಿಗೆ ಹಲವು ದೌರ್ಬಲ್ಯ ಇರುತ್ತವೆ. ನಾವು ಭಾವನೆಗಳೊಂದಿಗೆ ಬದುಕುವ ದೌರ್ಬಲ್ಯದವರಾಗಿದ್ದೇನೆ. ಕೆಲವರು ಚಾಡಿ ಕೇಳುವ ದೌರ್ಬಲ್ಯ ಹೊಂದಿರುತ್ತಾರೆ. ಈ ಚಾಡಿ ಕೇಳಿದ್ದರಿಂದಲೇ ಹೀಗೆ ಆಗಿರಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>