ಈ ಕುರಿತು ಹೇಳಿಕೆ ನೀಡಿರುವ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ್ ಸಿಂಗ್ ‘ನಗರದ ರೈಲು ನಿಲ್ದಾಣ ಅತಿ ಸುಂದರವಾಗಿ ಕಾಣುವಂತೆ ಮಾಡಲು ಮತ್ತು ಪರಿಸರ ಸ್ನೇಹಿಯಾಗಿ ರೂಪಿಸಲು ಶ್ರಮಿಸುತ್ತಿದ್ದೇವೆ. ನಿಲ್ದಾಣದಲ್ಲಿ ಅಂದವಾಗಿ ಬಿಡಿಸಿರುವ ಚಿತ್ರಗಳು ಪ್ರಯಾಣಿಕರ ಆಕರ್ಷಣೆಗಷ್ಟೇ ಅಲ್ಲ; ಜನರು ತ್ಯಾಗಗಳನ್ನು ಪ್ರತಿಬಿಂಬಿಸುತ್ತಾರೆ ಎನ್ನುವ ಸಂದೇಶ ನೀಡುವುದು ನಮ್ಮ ಉದ್ದೇಶ’ ಎಂದರು.