‘ಪೊಲೀಸರ ದೌರ್ಜನ್ಯದಿಂದ ಗಂಡ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ನೆಪದಲ್ಲಿ ಪೊಲೀಸರು ಬೂಟುಗಾಲಲಲ್ಲಿ ಒದ್ದು, ಚಿತ್ರ ಹಿಂಸೆ ನೀಡಿದ್ದಾರೆ ಎಂದು ನನ್ನ ಬಳಿ ಹೇಳಿಕೊಂಡಿದ್ದಾರೆ. ನಮ್ಮ ಸಂಬಂಧಿಕರನ್ನೆಲ್ಲ ಕರೆದು ವಿಚಾರಣೆ ಮಾಡುತ್ತ, ಹಿಂಸೆ ಕೊಡುತ್ತಿದ್ದಾರೆ’ ಎಂದು ಲಕ್ಷ್ಮಣ ಅವರ ಪತ್ನಿ ಶಾರದಾ ಇಂದರಗಿ ಆರೋಪಿಸಿದರು.