ಇದೀಗ ಚುಣಾವಣಾ ಅಖಾಡ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲೇ ಟಿಕೆಟ್ಗಾಗಿ ಪೈಪೋಟಿ ನಡೆದಿದೆ. ಲಾಡ್ ಅವರು ಕ್ಷೇತ್ರದಲ್ಲಿ ಅಕ್ಕಿ ವಿತರಣೆಯ ಜತೆಗೆ, ಕೋವಿಡ್ನಲ್ಲಿ ದುಡಿದ ಆಶಾ ಕಾರ್ಯಕರ್ತೆಯರಿಗೆ ಬೃಹತ್ ಸನ್ಮಾನ ಸಮಾರಂಭ, ದೇವಿಯರ ಜಾತ್ರೆಯಲ್ಲಿ ಮಹಿಳೆಯರಿಗೆ ಸೀರೆ, ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ 9 ಕಿ.ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಕ್ಷೇತ್ರದ ಮೂಲಕ ಜನರನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಆ ಮೂಲಕ ವಿಧಾನಸಭೆಗೆ ಕ್ಷೇತ್ರದಿಂದ ಮರು ಆಯ್ಕೆಗೆ ಮತದಾರರ ಓಲೈಕೆ ನಡೆಸುತ್ತಿದ್ದಾರೆ ಎಂದು ಕ್ಷೇತ್ರದ ಜನರು ಹೇಳುತ್ತಿದ್ದಾರೆ.