ಧಾರವಾಡ: ದಶಕಗಳ ಕಾಲ ಕನ್ನಡದಲ್ಲಿ ಸಾಹಿತ್ಯ ಕೃಷಿ ಮಾಡಿದ್ದ ಡಾ. ಚೆನ್ನವೀರ ಕಣವಿ ಅವರ ಸಾವು, ಕರ್ನಾಟಕಕ್ಕಷ್ಟೇ ಅಲ್ಲದೆ, ಭಾರತೀಯ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಚಿಂತಕ ಡಾ. ಜಿ.ಎನ್. ದೇವಿ ಹೇಳಿದರು.
ಇಲ್ಲಿನ ಕಲ್ಯಾಣನಗರದಲ್ಲಿ ಕಣವಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಅವರ ಸಾಹಿತ್ಯ ದೇಶದಾದ್ಯಂತ ಪಸರಿಸಿದೆ. ಸರ್ಕಾರ ಕಣವಿ ಅವರ ಸಾಹಿತ್ಯ ಕೊಡುಗೆಯನ್ನು ಪರಿಗಣಿಸಿ ಸೂಕ್ತ ಗೌರವ ನೀಡಬೇಕು ಎಂದು ಒತ್ತಾಯಿಸಿದರು.