ಹುಬ್ಬಳ್ಳಿ: ಕರ್ನಾಟಕ ಚದುರಂಗ ದಿನದ ಅಂಗವಾಗಿ ಹುಬ್ಬಳ್ಳಿ ಚೆಸ್ ಅಕಾಡೆಮಿಯು ಡಿ. 1ರಂದು ಬೈರಿದೇವರಕೊಪ್ಪದ ಸದಾಶಿವಾನಂದ ನಗರದ ಆಲ್ ಸೇಂಟ್ಸ್ ಶಾಲೆಯಲ್ಲಿ ರಾಜ್ಯಮಟ್ಟದ ಚೆಸ್ ಟೂರ್ನಿ ಹಮ್ಮಿಕೊಂಡಿದೆ.
1ರಿಂದ 4ನೇ ತರಗತಿ, 5ರಿಂದ7ನೇ ತರಗತಿ, 8ರಿಂದ 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ಜರುಗಲಿವೆ.
ಸ್ವಿಸ್ ಲೀಗ್ ಮಾದರಿಯಲ್ಲಿ ನಡೆಯಲಿರುವ ಟೂರ್ನಿ ಒಟ್ಟು ಆರು ಸುತ್ತುಗಳನ್ನು ಒಳಗೊಂಡಿರುತ್ತವೆ. ಸ್ಪರ್ಧಾಳುಗಳು ಅಂದು ಬೆಳಿಗ್ಗೆ 9 ಗಂಟೆಗೆ ಹಾಜರಿರಬೇಕು ಎಂದು ಅಕಾಡೆಮಿಯ ಸಂಸ್ಥಾಪಕ ಕೆ.ವಿ. ಶ್ರೀಪಾದ ತಿಳಿಸಿದ್ದಾರೆ.
ಇನ್ನಷ್ಟು ಮಾಹಿತಿಗೆ ಶ್ರೀಪಾದ ಅವರ ಮೊ. 9886497747 ಅಥವಾ ಚಂದ್ರಶೇಖರ ಯತ್ನಟ್ಟಿ 7892237010 ಸಂಪರ್ಕಿಸಿ.