ಹುಬ್ಬಳ್ಳಿ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತಿಮ ದರ್ಶನ ಪಡೆಯಲು ಧಾರವಾಡಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡೆ ಗಳಿಗೆಯಲ್ಲಿ ತಮ್ಮ ಭೇಟಿ ರದ್ದುಗೊಳಿಸಿದ್ದಾರೆ.
ವಿಶೇಷ ಹೆಲಿಕಾಪ್ಟರ್ನಲ್ಲಿ ಮುಖ್ಯಮಂತ್ರಿ ಧಾರವಾಡಕ್ಕೆ ಬಂದು, ಕಣವಿ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಅವರು ಬೆಳಿಗ್ಗೆ ಮಾಧ್ಯಮದವರಿಗೆ ತಿಳಿಸಿದ್ದರು.