<p><strong>ಹುಬ್ಬಳ್ಳಿ</strong>: ‘ಬಿಜೆಪಿಯ ‘ಬಿ ಟೀಂ’ ಎಂದು ಕರೆದಾಗ, ಜೆಡಿಎಸ್ನವರಿಗೆ ಕೋಪ ಬರುತಿತ್ತು. ಆದರೆ, ಈಗ ಅವರೇ ಆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>‘ಜಾತ್ಯತೀತ ಎಂದು ಹೆಸರು ಇಟ್ಟುಕೊಂಡು, ಕೋಮುವಾದಿಗಳ ಜೊತೆ ಸೇರಿದ್ದಾರೆ. ಯಾವ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ದೇವೇಗೌಡರು ಹೇಳಿದ್ದರು. ಆದರೆ, ಪಕ್ಷದ ಉಳಿವಿಗಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದಾಗಿ ಜಿ.ಟಿ. ದೇವೇಗೌಡರಿಂದ ಹೇಳಿಸಿದ್ದಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p><p>ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು: ‘ಜಿ–20 ಶೃಂಗಸಭೆಯ ಸಂದರ್ಭದಲ್ಲಿ ರಾಷ್ಟ್ರಪತಿಯವರು ಆಯೋಜಿಸಿರುವ ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು. ಅವರು ಬರೀ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಲ್ಲ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಹೌದು. ನನಗೆ ಆಹ್ವಾನವಿದೆ. ಆದರೆ, ನಾನು ಭಾಗವಹಿಸಲ್ಲ’ ಎಂದರು.</p><p>‘ಮಹದಾಯಿ, ಕೃಷ್ಣ ಮೇಲ್ದಂಡೆ ಯೋಜನೆ, ಮೇಕೆದಾಟು, ಕಾವೇರಿ ಸೇರಿ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಲು ಪ್ರಧಾನಿ ಅವರ ಕಾಲಾವಕಾಶ ಕೋರಿದ್ದೇವೆ. ಇನ್ನೂ ಸಮಯ ನೀಡಿಲ್ಲ’ ಎಂದರು.</p><p>‘ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ ನಿರಾಕ್ಷೇಪಣೆ ಪತ್ರ ಕೊಡಿಸಿಲ್ಲ. ಅದನ್ನು ನೀಡಿದರೆ, ನಾವು ಕಾಮಗಾರಿ ಆರಂಭಿಸಲು ಸಿದ್ಧ’ ಎಂದರು. </p><p>‘ಬರ ಎದುರಿಸಲು ಕೇಂದ್ರ ಸರ್ಕಾರದ ನೆರವೂ ಬೇಕು. ಬರ ಘೋಷಣೆಗೆ ನಿಯಮಗಳನ್ನು ಪ್ರತಿ 2 ವರ್ಷಕ್ಕೊಮ್ಮೆ ಬದಲಿಸಬೇಕು. 3 ವರ್ಷವಾದರೂ ಬದಲಿಸಿಲ್ಲ. ಬದಲಾವಣೆ ಕೋರಿ ಪತ್ರ ಬರೆದಿರುವೆ’ ಎಂದರು.</p><p>‘ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಶಾಲಾ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಲಾಗಿದೆ. ಸಮವಸ್ತ್ರಕ್ಕೆ ಪಾವತಿಸಲಾದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><blockquote>ನಾನು ಯಾವುದೇ ಕಾರಣಕ್ಕೂ ರಾಷ್ಟ್ರರಾಜಕಾರಣಕ್ಕೆ ಹೋಗಲ್ಲ. ಎಚ್.ವಿಶ್ವನಾಥ ಸೇರಿ ಹಲವು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಬಿಜೆಪಿಯ ‘ಬಿ ಟೀಂ’ ಎಂದು ಕರೆದಾಗ, ಜೆಡಿಎಸ್ನವರಿಗೆ ಕೋಪ ಬರುತಿತ್ತು. ಆದರೆ, ಈಗ ಅವರೇ ಆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>‘ಜಾತ್ಯತೀತ ಎಂದು ಹೆಸರು ಇಟ್ಟುಕೊಂಡು, ಕೋಮುವಾದಿಗಳ ಜೊತೆ ಸೇರಿದ್ದಾರೆ. ಯಾವ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ದೇವೇಗೌಡರು ಹೇಳಿದ್ದರು. ಆದರೆ, ಪಕ್ಷದ ಉಳಿವಿಗಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದಾಗಿ ಜಿ.ಟಿ. ದೇವೇಗೌಡರಿಂದ ಹೇಳಿಸಿದ್ದಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p><p>ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು: ‘ಜಿ–20 ಶೃಂಗಸಭೆಯ ಸಂದರ್ಭದಲ್ಲಿ ರಾಷ್ಟ್ರಪತಿಯವರು ಆಯೋಜಿಸಿರುವ ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು. ಅವರು ಬರೀ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಲ್ಲ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಹೌದು. ನನಗೆ ಆಹ್ವಾನವಿದೆ. ಆದರೆ, ನಾನು ಭಾಗವಹಿಸಲ್ಲ’ ಎಂದರು.</p><p>‘ಮಹದಾಯಿ, ಕೃಷ್ಣ ಮೇಲ್ದಂಡೆ ಯೋಜನೆ, ಮೇಕೆದಾಟು, ಕಾವೇರಿ ಸೇರಿ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಲು ಪ್ರಧಾನಿ ಅವರ ಕಾಲಾವಕಾಶ ಕೋರಿದ್ದೇವೆ. ಇನ್ನೂ ಸಮಯ ನೀಡಿಲ್ಲ’ ಎಂದರು.</p><p>‘ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ ನಿರಾಕ್ಷೇಪಣೆ ಪತ್ರ ಕೊಡಿಸಿಲ್ಲ. ಅದನ್ನು ನೀಡಿದರೆ, ನಾವು ಕಾಮಗಾರಿ ಆರಂಭಿಸಲು ಸಿದ್ಧ’ ಎಂದರು. </p><p>‘ಬರ ಎದುರಿಸಲು ಕೇಂದ್ರ ಸರ್ಕಾರದ ನೆರವೂ ಬೇಕು. ಬರ ಘೋಷಣೆಗೆ ನಿಯಮಗಳನ್ನು ಪ್ರತಿ 2 ವರ್ಷಕ್ಕೊಮ್ಮೆ ಬದಲಿಸಬೇಕು. 3 ವರ್ಷವಾದರೂ ಬದಲಿಸಿಲ್ಲ. ಬದಲಾವಣೆ ಕೋರಿ ಪತ್ರ ಬರೆದಿರುವೆ’ ಎಂದರು.</p><p>‘ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಶಾಲಾ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಲಾಗಿದೆ. ಸಮವಸ್ತ್ರಕ್ಕೆ ಪಾವತಿಸಲಾದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><blockquote>ನಾನು ಯಾವುದೇ ಕಾರಣಕ್ಕೂ ರಾಷ್ಟ್ರರಾಜಕಾರಣಕ್ಕೆ ಹೋಗಲ್ಲ. ಎಚ್.ವಿಶ್ವನಾಥ ಸೇರಿ ಹಲವು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>