<p><strong>ನವಲಗುಂದ</strong>: ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶುವೊಂದು ಮರಣ ಹೊಂದಿದೆ ಎಂದು ಪಾಲಕರು ಆರೋಪಿಸಿದ ಘಟನೆ ಶುಕ್ರವಾರ ನಡೆದಿದೆ.</p>.<p>ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭಾ ಕ್ಷೇತ್ರದ ತಾಲ್ಲೂಕಿನ ಕಿತ್ತೂರು ಗ್ರಾಮದ ಮಹಿಳೆ ಹೆರಿಗೆಗಾಗಿ ದಾಖಲು ಮಾಡಿಕೊಳ್ಳಲಾಗಿತ್ತು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಮಗು ಮತ್ತು ತಾಯಿಯನ್ನು ವಾರ್ಡ್ಗೆ ಸ್ಥಳಾಂತರ ಮಾಡಲಾಗಿತ್ತು. </p>.<p>ವಾರ್ಡ್ನಲ್ಲಿ ಸ್ಥಳಾಂತರ ಮಾಡಿ ಮೂರು ದಿನವಾದರೂ ವೈದ್ಯಕೀಯ ಉಪಚಾರ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಶುಕ್ರವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಈ ಕುರಿತು ವೈದ್ಯ ಸಿಬ್ಬಂದಿ ಗಮನಕ್ಕೆ ತಂದಾಗ ಸ್ಥಳೀಯ ಮಕ್ಕಳ ತಜ್ಞರ ಬಳಿ ನವಜಾತ ಶಿಶುವನ್ನು ಪರೀಕ್ಷೆಗೆ ಕಳುಹಿಸಿದಾಗ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.</p>.<p>ಈ ಕುರಿತು ಮೃತ ಪಾಲಕರು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗು ಹುಟ್ಟಿದ ದಿನದಿಂದ ಮೂರು ದಿನಗಳಾದರೂ ವೈದ್ಯಕೀಯ ಉಪಚಾರ ಮಾಡಲು ನಿರ್ಲಕ್ಷ ತೊರಿದ್ದರಿಂದ ತಮ್ಮ ಮಗು ಮರಣಹೊಂದಿದೆ ಎಂದು ಆರೋಪಿಸಿದ್ದಾರೆ.</p>.<p>ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಜನ ಹಿಡಿಶಾಪ ಹಾಕಿದರಲ್ಲದೆ ಮಹಿಳೆಯ ಸಂಬಂಧಿಕರು ರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶುವೊಂದು ಮರಣ ಹೊಂದಿದೆ ಎಂದು ಪಾಲಕರು ಆರೋಪಿಸಿದ ಘಟನೆ ಶುಕ್ರವಾರ ನಡೆದಿದೆ.</p>.<p>ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭಾ ಕ್ಷೇತ್ರದ ತಾಲ್ಲೂಕಿನ ಕಿತ್ತೂರು ಗ್ರಾಮದ ಮಹಿಳೆ ಹೆರಿಗೆಗಾಗಿ ದಾಖಲು ಮಾಡಿಕೊಳ್ಳಲಾಗಿತ್ತು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಮಗು ಮತ್ತು ತಾಯಿಯನ್ನು ವಾರ್ಡ್ಗೆ ಸ್ಥಳಾಂತರ ಮಾಡಲಾಗಿತ್ತು. </p>.<p>ವಾರ್ಡ್ನಲ್ಲಿ ಸ್ಥಳಾಂತರ ಮಾಡಿ ಮೂರು ದಿನವಾದರೂ ವೈದ್ಯಕೀಯ ಉಪಚಾರ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಶುಕ್ರವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಈ ಕುರಿತು ವೈದ್ಯ ಸಿಬ್ಬಂದಿ ಗಮನಕ್ಕೆ ತಂದಾಗ ಸ್ಥಳೀಯ ಮಕ್ಕಳ ತಜ್ಞರ ಬಳಿ ನವಜಾತ ಶಿಶುವನ್ನು ಪರೀಕ್ಷೆಗೆ ಕಳುಹಿಸಿದಾಗ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.</p>.<p>ಈ ಕುರಿತು ಮೃತ ಪಾಲಕರು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಗು ಹುಟ್ಟಿದ ದಿನದಿಂದ ಮೂರು ದಿನಗಳಾದರೂ ವೈದ್ಯಕೀಯ ಉಪಚಾರ ಮಾಡಲು ನಿರ್ಲಕ್ಷ ತೊರಿದ್ದರಿಂದ ತಮ್ಮ ಮಗು ಮರಣಹೊಂದಿದೆ ಎಂದು ಆರೋಪಿಸಿದ್ದಾರೆ.</p>.<p>ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಜನ ಹಿಡಿಶಾಪ ಹಾಕಿದರಲ್ಲದೆ ಮಹಿಳೆಯ ಸಂಬಂಧಿಕರು ರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>